ಬಿಎಸ್ವೈ ಭೇಟಿ ಸಾಬೀತಾದ್ರೆ ರಾಜಕೀಯ ಸನ್ಯಾಸ : ಸಿದ್ದರಾಮಯ್ಯ Siddaramaiah saaksha tv
ಕಲಬುರಗಿ : ಸಭೆ, ಸದನ ಬಿಟ್ಟರೇ ಯಾವುದೇ ಸಂದರ್ಭದಲ್ಲಿ ನಾನು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಸಾಬೀತಾದರೇ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಸವಾಲ್ ಹಾಕಿದ್ದಾರೆ.
ಸಿದ್ದರಾಮಯ್ಯ ಯಡಿಯೂರಪ್ಪನವರ ಜೊತೆ ಕೈ ಜೋಡಿಸಿ ಮೈತ್ರಿ ಸರ್ಕಾರ ಬೀಳಿಸಿದರು ಎಂಬ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಕಲಬುಗರಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಭೆ, ಸದನ ಬಿಟ್ಟರೆ ಯಾವುದೇ ಸಂದರ್ಭದಲ್ಲಿ ನಾನು ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿಲ್ಲ.
ಉಳಿದ ಸಮಯದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದು, ಸಾಬೀತು ಮಾಡಿದ್ದಾದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.
ನಾನು ಯಡಿಯೂರಪ್ಪ ಅವರನ್ನು ಹುಟ್ಟು ಹಬ್ಬದ ಸಂದರ್ಭದಲ್ಲಿ ಭೇಟಿ ಮಾಡಿದ್ದೆ, ನಂತರ ಅವರನ್ನು ಭೇಟಿ ಮಾಡಿಲ್ಲಾ. ಭೇಟಿ ಮಾಡೋದು ಅದೇ ಕುಮಾರಸ್ವಾಮಿ ಎಂದು ದೂರಿದರು.
ಅಲ್ಲದೆ ಅಧಿಕಾರಕ್ಕಾಗಿ ರಾಜಕೀಯ ಮಾಡಬಾರದು. ಕುಮಾರಸ್ವಾಮಿ ಬಿಜೆಪಿ ಜೊತೆ ಹೋದ್ರಲ್ಲಾ ಅದು ಏನು ಆವಾಗ ಕುಮಾರಸ್ವಾಮಿ ಸನ್ಯಾಸಿ ಆಗಲಿಕ್ಕೆ ಹೋಗಿದ್ರಾ ಎಂದು ಕುಟುಕಿದರು.