ಬಿಜೆಪಿ ಕೇಂದ್ರದ ನಾಯಕರ ಸಂಪರ್ಕದಲ್ಲಿ ಸಿದ್ದರಾಮಯ್ಯ
ಮೈಸೂರು : ನಮ್ಮ ಪಕ್ಷದ ಬಗ್ಗೆ ನಮಗಿಂತ ಸಿದ್ದರಾಮಯ್ಯ ಅವರಿಗೆ ಹೆಚ್ಚಾಗಿ ಗೊತ್ತಾಗುತ್ತಿದೆ. ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ..
ಉಪಚುನಾವಣೆ ಫಲಿತಾಂಶದ ಬಳಿಕ ಸಿಎಂ ಬದಲಾವಣೆ ಖಚಿತ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರುವ ಬಗ್ಗೆ ಗುಮಾನಿ ಇದೆ.
ನಮ್ಮ ಪಕ್ಷದ ಬಗ್ಗೆ ನಮಗಿಂತ ಹೆಚ್ಚಾಗಿ ಸಿದ್ದರಾಮಯ್ಯನವರಿಗೆ ಗೊತ್ತಾಗುತ್ತಿದೆ. ಅದು ಹೇಗೆ ಗೊತ್ತಾಗುತ್ತಿದಿಯೋ ನನಗೆ ತಿಳಿದಿಲ್ಲ. ಬಹುಶಃ ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು.
ಕಾಂಗ್ರೆಸ್ ನಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರಬಹುದು. ಇದರಿಂದ ಅವರು ಈ ರೀತಿ ಹೇಳಿಕೆ ನೀಡುತ್ತಿರಬಹುದು ಎಂದು ಪ್ರತಿಕ್ರಿಯಿ ನೀಡಿದ್ದಾರೆ.
ಇದೇ ವೇಳೆ ಉಪಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಸಂಸದರು, ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ನಾವು ದೊಡ್ಡ ಅಂತರದಲ್ಲಿ ಗೆಲ್ಲುತ್ತಿದ್ದೇವೆ. ಶಿರಾದಲ್ಲಿ 70 ವರ್ಷದಲ್ಲಿ ಗೆಲ್ಲುವ ಅವಕಾಶ ಸಿಕ್ಕಿರಲಿಲ್ಲ.
ಗುಜರಾತ್ ನಲ್ಲಿ ಕಮಲ ಕಿಲಕಿಲ.. ಗೆಲುವಿನತ್ತ ಕೇಸರಿ ಪಡೆ
ಈಗ ಸಂಘಟಿತರಾಗಿ ಹೋರಾಟ ಮಾಡಿದಕ್ಕೆ ಗೆಲುವು ಸಿಗುತ್ತಿದೆ. ಉಪಚುನಾವಣೆ ಆಡಳಿತ ಪಕ್ಷದ ಪರವಾಗಿರುತ್ತವೆ. ಉಪಚುನಾವಣೆಯಲ್ಲಿ ಹಣ, ಅಧಿಕಾರ ದುರುಪಯೋಗವಾಗುತ್ತದೆ ಎಂದು ಆರೋಪಿಸಲಾಗುತ್ತಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಉಪಚುನಾವಣೆಯಲ್ಲಿ ಮಾಡಿದ್ದೇನು? ನಂಜನಗೂಡು, ಚಾಮರಾಜನಗರ ಉಪಚುನಾವಣೆ ಹೇಗೆ ಗೆದ್ದರು ಎಂದು ಪ್ರಶ್ನಿಸಿದ್ದಾರೆ.
ಉಪ ಚುನಾವಣೆಯನ್ನು ಹೇಗೆ ಮಾಡಬೇಕು ಎಂದು ಮೇಲ್ಪಂಕ್ತಿ ಹಾಕಿಕೊಟ್ಟವರೇ ಕಾಂಗ್ರೆಸ್ ನವರು ಎಂದ ಪ್ರತಾಪ್ ಸಿಂಹ, ಉಪಚುನಾವಣೆಯಲ್ಲಿ ಎಲ್ಲ ಬಲಗಳು ಬಳಕೆಯಾಗುವುದು ಸಹಜ. ಕಾಂಗ್ರೆಸ್ ಸೋತಾಗ ಅವರಿಗೆ ಇವಿಎಂ ನೆನಪಾಗುತ್ತದೆ.
ಕಾಂಗ್ರೆಸ್ ನದ್ದು ಮನೆಯೊಂದು ಮೂರು ಬಾಗಿಲು ಪರಿಸ್ಥಿತಿ : ಆರ್.ಅಶೋಕ್
ಅವರು ಗೆದ್ದ ಕಡೆ ಈ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಇವಿಎಂ ವಿಚಾರದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ. ಅಮೆರಿಕಾ ಚುನಾವಣೆಯಲ್ಲೂ ಇದು ಸಾಬೀತಾಗಿದೆ ಎಂದು ಕಾಂಗ್ರೆಸ್ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿದರು.
ಇನ್ನು ಕಾಂಗ್ರೆಸ್ ಪಕ್ಷ ಹಾಳಾದರೂ ಡಿ.ಕೆ.ಶಿವಕುಮಾರ್ ಅವರಿಗೆ ಯಾವುದೇ ಸ್ಥಾನ ಸಿಗಬಾರದು ಎಂಬುದು ಸಿದ್ದರಾಮಯ್ಯನವರ ಉದ್ದೇಶ. ಇದೇ ಕಾರಣಕ್ಕಾಗಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ಸಿದ್ದರಾಮಯ್ಯ ಬಯಸುತ್ತಿದ್ದಾರೆ.
ಯಾರು ಕೆಪಿಸಿಸಿ ಅಧ್ಯಕ್ಷರಾಗಿರುತ್ತಾರೋ ಅವರೇ ಮುಖ್ಯಮಂತ್ರಿ ಆಗೋದು ಕಾಂಗ್ರೆಸ್ ನ ಪರಂಪರೆ. ಇದು ಸಿದ್ದರಾಮಯ್ಯಗೆ ಗೊತ್ತಿದೆ. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದರೇ ಡಿಕೆಶಿ ಸಿಎಂ ಆಗುತ್ತಾರೆ.
ಇದನ್ನು ತಪ್ಪಿಸಲು ಸಿದ್ದರಾಮಯ್ಯ ಚುನಾವಣೆಗಳಲ್ಲಿ ಕಾಂಗ್ರೆಸ್ ನ ಸೋಲನ್ನು ಬಯಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಹಿನ್ನೆಡೆಗೆ ಸಿದ್ದರಾಮಯ್ಯ ಅವರೇ ಕಾರಣರಾಗುತ್ತಿದ್ದಾರೆ ಎಂದು ಕುಟುಕಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel