Siddaramaiah – 1.5 ಕೋಟಿ ಸಾಲ ಪಡೆದಿದ್ದು ನಿಜ
ಬೆಂಗಳೂರು : ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ ನನ್ನ 40 ವರ್ಷಗಳ ಗೆಳೆಯನಿಂದ 1.5 ಕೋಟಿ ಸಾಲ ಪಡೆದಿದ್ದು ನಿಜ. ಸಾಲ ಪಡೆಯುವುದು ಅಪರಾಧನಾ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ…
ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ ನನ್ನ 40 ವರ್ಷಗಳ ಗೆಳೆಯನಿಂದ 1.5 ಕೋಟಿ ಸಾಲ ಪಡೆದಿದ್ದು ನಿಜ. ಸಾಲ ಪಡೆಯುವುದು ಅಪರಾಧನಾ?
ವಿವೇಕ್ ಅವರನ್ನು ಪಿಟಿಸಿ ಸದಸ್ಯನನ್ನಾಗಿ ಮಾಡಿದ್ದು ಕೂಡ ನಿಜ. ಅವರಿಂದ ಸಾಲ ಪಡೆದದ್ದಕ್ಕೂ ಅವರ ನೇಮಕಕ್ಕೂ ಸಂಬಂಧ ಇಲ್ಲ. ಇದನ್ನೂ ಲೋಕಾಯುಕ್ತ ತನಿಖೆಗೆ ವಹಿಸುವುದಾದರೆ ನನ್ನ ವಿರೋಧ ಇಲ್ಲ. ತನಿಖೆ ಮಾಡಲಿ. ನಾನೇನು ಬಸವರಾಜ ಬೊಮ್ಮಾಯಿ ಅವರ ರೀತಿ ದಾಖಲೆ ಕೊಡಿ ಎಂದು ಕೇಳಲ್ಲ ಎಂದು ವ್ಯಂಗ್ಯವಾಡಿದ್ದಾರೆ.
![Siddaramaiah - It is true that he borrowed one and a half crores](http://saakshatv.com/wp-content/uploads/2022/10/sid-twt.jpg)
ಕೊರೊನಾ ಕಾಲದಲ್ಲಿ ಮಾರಾಟ ಮಾಡಿದ್ದ ಉಪಕರಣಗಳ ಬಿಲ್ ಪಾವತಿಗೆ ಲಂಚ ಕೇಳಿದ್ದಾರೆಂದು ಆರೋಪಿಸಿ ಕಳೆದ ತಿಂಗಳು ಬಸವರಾಜ್ ಅಮರಗೋಳ ಎಂಬ ಗುತ್ತಿಗೆದಾರ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಪತ್ರ ಬರೆದಿದ್ದರು.
ಬಸವರಾಜ್ ಅಮರಗೋಳ ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದ ವಿವರಗಳನ್ನೂ ರಾಷ್ಟ್ರಪತಿಗಳಿಗೆ ಪತ್ರದಲ್ಲಿ ತಿಳಿಸಿದ್ದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಎಷ್ಟು ಮಂದಿಯನ್ನು ಆತ್ಮಹತ್ಯೆಗೆ ನೂಕುತ್ತೀರಿ ಎಂದು ಕಿಡಿಕಾರಿದ್ದಾರೆ.