ಅಂಗಡಿ ಓಪನ್ ಮಾಡಿ, ವಾಹನಕ್ಕೆ ನಿಷೇಧ ವಿಧಿಸಿರೋದು ಮೂರ್ಖತನದ ನಿರ್ಧಾರ
ಬೆಂಗಳೂರು : ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಬಿಜೆಪಿ ಸರ್ಕಾರದ ಮೂರ್ಖತನದ ನಿರ್ಧಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ. ಪರಿಷ್ಕøತ ಲಾಕ್ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಬಿಜೆಪಿ ಸರ್ಕಾರದ ಮೂರ್ಖತನದ ನಿರ್ಧಾರ.
ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ. ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ. ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ ಎಂದು ಪ್ರಶ್ನಿಸಿದ್ದಾರೆ.
ಹೊಸ ಲಾಕ್ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ. ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ. ಹೊಟೇಲ್ನಲ್ಲಿ ಪಾರ್ಸಲ್ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರ್ಕಾರ?
ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ.
ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ ಸಿಎಂ ಬಿ.ಎಸ್.ಯಡಿಯೂರಪ್ಪ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ
ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೆÇಲೀಸರು ಮತ್ತು ಜನತೆಯ ನಡುವಿನ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು ಎಂದು ಸಲಹೆ ನೀಡಿದ್ದಾರೆ.










