ಮೋದಿ ಬಂದು ದೇಶವನ್ನು ಹಾಳುಮಾಡಿದ್ದಾರೆ.. 2023ಕ್ಕೆ ನಾವೇ ಅಧಿಕಾರಕ್ಕೆ ಬರ್ತೀವಿ
ಬೆಳಗಾವಿ : ಬಿಜೆಪಿ ಪಕ್ಷ ಏನೂ ಕೆಲಸ ಮಾಡಿಲ್ಲ. ನರೇಂದ್ರ ಮೋದಿ ಬಂದು ದೇಶವನ್ನು ಹಾಳುಮಾಡಿದ್ದಾರೆ.
ರಾಜ್ಯವನ್ನು ಇವರು ಹಾಳು ಮಾಡಿದ್ದಾರೆ ಎಂದು ರಾಜ್ಯ-ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅಕ್ರೋಶ ಹೊರಹಾಕಿದ್ದಾರೆ.
ಮತಾಂತರ ನಿಷೇಧ ಮಸೂದೆ ವಿರೋಧಿಸಿ ಬೆಳಗಾವಿಯಲ್ಲಿ ಮೆಥೋಡಿಸ್ಟ್ ಚರ್ಚ್ನಲ್ಲಿ ಹೋರಾಟ ನಡೆಯುತ್ತಿದೆ.
ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಹೋಗಲಾಡಿಸಲು ಸರ್ಕಾರ ಕೆಲಸ ಮಾಡಬೇಕು.
ಅದನ್ನು ಬಿಟ್ಟು ಮತ್ತೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು. ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಮತಾಂತರ ಕಾಯ್ದೆ ತರುತ್ತಿದೆ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇನ್ನು ದೇಶದಲ್ಲಿ ಬಿಜೆಪಿ ಪಕ್ಷ ಏನೂ ಕೆಲಸ ಮಾಡಿಲ್ಲ ಎಂದು ಗುಡುಗಿದ ಸಿದ್ದರಾಮಯ್ಯ, ನರೇಂದ್ರ ಮೋದಿ ಬಂದು ದೇಶವನ್ನು ಹಾಳುಮಾಡಿದ್ದಾರೆ.
ಸಮಸ್ಯೆಗಳನ್ನು ಬೇರೆಡೆಗೆ ಡೈವರ್ಟ್ ಮಾಡಲು ಇಂತಹ ಕೆಲಸ ಮಾಡ್ತಿದ್ದಾರೆ. ನಾವು ಅಧಿಕಾರದಲ್ಲಿ ಇರಲಿ ಬಿಡಲಿ ಮತಾಂತರ ಕಾಯ್ದೆ ವಿರೋಧ ಮಾಡ್ತೀವಿ.
ಮತಾಂತರ ಕಾಯ್ದೆ ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈಹಾಕಿ ಪಾಸ್ ಮಾಡಿದ್ರೆ, ನಾವು 2023ಕ್ಕೆ ಅಧಿಕಾರಕ್ಕೆ ಬಂದು ವಾಪಸ್ ಪಡೆದುಕೊಳ್ಳುತ್ತೇವೆ ಎಂದರು.