ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯಪಾಲರು ಭಾಷಣದಲ್ಲಿ ಏನೂ ಹೇಳಿಲ್ಲ, ಕಾರಣ ಬಿಜೆಪಿ ಸಾಧನೆ ಶೂನ್ಯ

admin by admin
January 28, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯಪಾಲರು ಭಾಷಣದಲ್ಲಿ ಏನೂ ಹೇಳಿಲ್ಲ, ಕಾರಣ ಬಿಜೆಪಿ ಸಾಧನೆ ಶೂನ್ಯ

ಬೆಂಗಳೂರು : ರಾಜ್ಯಪಾಲ ಭಾಷಣದಲ್ಲಿ ಏನೂ ಹೇಳಿಲ್ಲ. ಇದಕ್ಕೆ ಕಾರಣ ರಾಜ್ಯ ಬಿಜೆಪಿ ಸರ್ಕಾರದ ಶೂನ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Related posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

July 9, 2026
ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026

ವಿಧಾನ ಮಂಡಲ ಅಧಿವೇಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿಲುವು, ಯೋಜನೆಗಳು, ಮುನ್ನೋಟದ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಆದರೆ, ರಾಜ್ಯಪಾಲರು ಇಂದು ಮಾಡಿದ ಭಾಷಣದಲ್ಲಿ ಆ ಯಾವುದೂ ಇಲ್ಲ. ಇದೊಂದು ಸುಳ್ಳಿನ ಕಂತೆ. ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಆರೋಪಿಸಿದರು.

ಯಾವುದೇ ಒಂದು ಸರ್ಕಾರಕ್ಕೆ ದೂರದೃಷ್ಟಿ ಇರಬೇಕು. ಈ ಸರ್ಕಾರದ ಅವಧಿ ಇನ್ನೂ ಎರಡೂವರೆ ವರ್ಷ ಇದೆ. ಈ ಅವಧಿಯಲ್ಲಿ ನಾವು ಏನು ಮಾಡಲಿದ್ದೇವೆ ಎಂಬುದನ್ನು ಹೇಳಬೇಕಿತ್ತು. ರಾಜ್ಯದ ಹಣಕಾಸು ಪರಿಸ್ಥಿತಿ, ನೀರಾವರಿ ಯೋಜನೆಗಳ ಕುರಿತು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪ ಮಾಡಬೇಕಿತ್ತು. ರಾಜ್ಯ ಅಭಿವೃದ್ಧಿಯಲ್ಲಿ 10 ವರ್ಷ ಹಿಂದಕ್ಕೆ ಹೋಗಿದೆ. ಹಣಕಾಸು ಪರಿಸ್ಥಿತಿ ಹದಗೆಡಲು, ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳಲು, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ ಮಾಡದಿರಲು ಕೊರೊನಾ ಕಾರಣ ಎಂದು ಮುಖ್ಯಮಂತ್ರಿ ಅವರು ನೆಪ ಹೇಳುತ್ತಾರೆ.
ಬಿಜೆಪಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ಈ ಅವಧಿಯಲ್ಲಿನ ಯೋಜನೆ, ಕಾರ್ಯಕ್ರಮಗಳು, ಮುನ್ನೋಟ, ದೂರದೃಷ್ಟಿ ಏನು ಎಂಬುದರ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಏನೂ ಹೇಳಿಲ್ಲ. ಇದಕ್ಕೆ ಕಾರಣ, ರಾಜ್ಯ ಬಿಜೆಪಿ ಸರ್ಕಾರದ ಶೂನ್ಯ ಸಾಧನೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರವಿದ್ದಾಗ ಪ್ರತಿ ವರ್ಷವೂ ಬೆಳಗಾವಿಯಲ್ಲಿ ಹತ್ತು ದಿನಗಳ ಕಾಲ ಅಧಿವೇಶನ ನಡೆಸಿದ್ದೇವೆ. ಸುವರ್ಣ ಸೌಧ ಕಟ್ಟಿಸಿದ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಸರ್ಕಾರಿ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡುತ್ತೇವೆ, ಉತ್ತರ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದವರು ಈಗ ಅಧಿವೇಶನ ನಡೆಸಲೂ ತಯಾರಿಲ್ಲ. ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಆ ಭಾಗದ ಜನತೆಗೆ ಸರ್ಕಾರ ದ್ರೋಹ ಮಾಡಿದೆ. ಹೀಗಾಗಿ ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ. ವರ್ಷಕ್ಕೆ ಒಮ್ಮೆಯಾದರೂ ಬೆಳಗಾವಿಯಲ್ಲಿ ಅಧಿವೇಶನ ನಡೆಯಲೇಬೇಕು ಎಂದು ಆಗ್ರಹಿಸಿದರು.

siddaramaiah

ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ. ಕೊರೊನಾದಂತಹ ಮಾರಕ ರೋಗವನ್ನು ಬ್ರಹ್ಮಾಂಡ ಭ್ರಷ್ಟಚಾರವೆಸಗಲು ದುರುಪಯೋಗ ಪಡಿಸಿಕೊಂಡ ಬಿಜೆಪಿ ಸರ್ಕಾರ, ರೋಗ ನಿಯಂತ್ರಣದಲ್ಲಿನ ವೈಫಲ್ಯಗಳನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಮರೆಮಾಚಲು ಪ್ರಯತ್ನಿಸಿದೆ.

ತೆರಿಗೆಯಲ್ಲಿ ಪಾಲು, 15ನೇ ಹಣಕಾಸು ಆಯೋಗದ ಅನುದಾನ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿವರವನ್ನು ರಾಜ್ಯಪಾಲರ ಭಾಷಣದಲ್ಲಿ ನೀಡಿದ್ದರೆ ಬಿಎಸ್ ವೈ ಸರ್ಕಾರದ ಬಣ್ಣ ಸಂಪೂರ್ಣ ಬಯಲಾಗುತ್ತಿತ್ತು. ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶವೂ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ರಾಜ್ಯ ಬಿಜೆಪಿ ಸರ್ಕಾರ, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.24,941.73 ಕೋಟಿ ಪರಿಹಾರವನ್ನು ಕೇಳಿ ರಾಜ್ಯಕ್ಕೆ ದ್ರೋಹ ಬಗೆದಿದೆ.

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಕೇಂದ್ರದಿಂದ ಕೇಳಿದರೂ ಸಿಕ್ಕಿರುವುದು ಮಾತ್ರ ರೂ.1,634 ಕೋಟಿ ಮಾತ್ರ. ರಾಜ್ಯ ಬಿಜೆಪಿ ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ. ಮಳೆ ಮತ್ತು ಪ್ರವಾಹದ ನಷ್ಟಕ್ಕೆ ರಾಜ್ಯ ಸರ್ಕಾರ ಇಲ್ಲಿಯ ವರೆಗೆ ನೀಡಿರುವ ಪರಿಹಾರ ಕೇವಲ ರೂ.36.57 ಕೋಟಿ ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ ಸಂತ್ರಸ್ತರಲ್ಲಿ ಯಾರೊಬ್ಬರಿಗೂ ಸೂಕ್ತ ಪರಿಹಾರಧನ ಈ ವರೆಗೆ ತಲುಪಿಲ್ಲ ಎಂದು ವಿವರಣೆ ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressSiddaramaiah
ShareTweetSendShare
Join us on:

Related Posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram