ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡೋದಕ್ಕೆ ನನ್ನ ವಿರೋಧವಿಲ್ಲ : ಸಿದ್ದರಾಮಯ್ಯ
ರಾಯಚೂರು : ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ಆದರೆ ಹೋರಾಟವನ್ನು ರಾಜಕೀಯ ಮಾಡುತ್ತಿರುವುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾಗಿನೆಲೆ ಗುರು ಪೀಠದ ತಿಂಥಣಿ ಬ್ರಿಡ್ಜ್ ನಲ್ಲಿ ಆಯೋಜಿಸಿದ್ದ ಹಾಲುಮತ ಸಂಸ್ಕøತಿ ವೈಭವ 2021 ಕಾರ್ಯಕ್ರಮ ಉದ್ಘಾಟಿಸಲು ಸಿದ್ದರಾಮಯ್ಯ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಬಗ್ಗೆ ಪ್ರತಿಕ್ರಿಯಿಸಿದರು.
ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ನೀಡುವುದಕ್ಕೆ ನಾನು ವಿರೋಧಿಸುವುದಿಲ್ಲ. ನಾನು ಹೋರಾಟವನ್ನು ಬೆಂಬಲಿಸುವೆ. ಆದರೆ, ಮೀಸಲಾತಿ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದು, ಇದರ ಹಿಂದೆ ಆರ್ಎಸ್ಎಸ್ ಕಾರ್ಯ ನಿರ್ವಹಿಸುತ್ತಿದೆ.
ಇದಕ್ಕೆ ನನ್ನ ವಿರೋಧವಿದೆ. ನಾನು ಕುರುಬ ಸಮಾಜದ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ. ಅದು ಯಶಸ್ವಿಯಾಗದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇನ್ನು ನಾನು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನಾಲ್ಕು ಜಿಲ್ಲೆಗಳಲ್ಲಿನ ಕುರುಬ ಸಮಾಜದವರಿಗೆ ಮೀಸಲಾತಿ ಕಲ್ಪಸಿದ್ದೆ.
ಕುಲಶಾಸ್ತ್ರ ಅಧ್ಯಯನಕ್ಕೆ ಆದೇಶಿಸಿ ವರ್ಷಗಳೇ ಕಳೆದಿದ್ದರೂ ಈವರೆಗೂ ಪೂರ್ಣಗೊಂಡಿಲ್ಲ. ಎಸ್ ಟಿ ಮೀಸಲಾತಿ ಹೋರಾಟದ ಹೆಸರಿನಲ್ಲಿ ಕುರುಬ ಸಮಾಜವನ್ನು ಒಡೆಯುವ ಹುನ್ನಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel