Siddaramaiah | ಸದ್ಯಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿಯಲ್ಲ
ಬೆಂಗಳೂರು : ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿ ಅವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸದ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು, ರಾಹುಲ್ ಗಾಂಧಿ ಅಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಕುಟುಕಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಟಾಂಗ್ ನೀಡಿದ್ದು, ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ಅವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ನೀವು ಪ್ರಧಾನಿ ನರೇಂದ್ರ ಮೋದಿ ಮತ್ತು ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ.
ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಬಸವರಾಜ ಬೊಮ್ಮಾಯಿ ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ..
ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ @BSBommai ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ.
3/8#PayCM— Siddaramaiah (@siddaramaiah) October 19, 2022
ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.








