ACB RAID | ಜಮೀರ್ ಮನೆ ಮೇಲೆ ಎಸಿಬಿ ದಾಳಿ | ಇದು ರಾಜಕೀಯ ಪ್ರೇರಿತ ಎಂದ ಸಿದ್ದರಾಮಯ್ಯ
ಬೆಂಗಳೂರು : ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮ್ಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದು ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮ್ಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಮೀರ್ ಅಹ್ಮದ್ ಖಾನ್ ಗೆ ಸೇರಿದ ರೈಲ್ವೆ ಕಂಟೋನ್ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಪಿಎಸ್ಐ ಹಗರಣದಲ್ಲಿ ಸರ್ಕಾರದ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿಬರುತ್ತಿದ್ದು, ಜನರ ಗಮನ ಬೇರೆಡೆಗೆ ತಿರುಗಿಸಲು ನಮ್ಮ ಪಕ್ಷದ ಶಾಸಕರಾದ @BZZameerAhmedK ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ಮೂಲಕ ದಾಳಿ ಮಾಡಿಸಲಾಗಿದೆ.
ಇಂಥಾ ರಾಜಕೀಯ ಪ್ರೇರಿತ ಎಸಿಬಿ ದಾಳಿಯನ್ನು ನಾನು ಖಂಡಿಸುತ್ತೇನೆ.
— Siddaramaiah (@siddaramaiah) July 5, 2022
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪಿಎಸ್ಐ ಹಗರಣದಲ್ಲಿ ಸರ್ಕಾರದ ಸಚಿವರು, ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿಬರುತ್ತಿದ್ದು, ಜನರ ಗಮನ ಬೇರೆಡೆಗೆ ತಿರುಗಿಸಲು ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹಮ್ಮದ್ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ಮೂಲಕ ದಾಳಿ ಮಾಡಿಸಲಾಗಿದೆ. ಇಂಥಾ ರಾಜಕೀಯ ಪ್ರೇರಿತ ಎಸಿಬಿ ದಾಳಿಯನ್ನು ನಾನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.