ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಹೊಗಲ್ಲ : ಸಿದ್ದರಾಮಯ್ಯ Siddaramaiah reaction on cm ibrahim statement
ಬೆಂಗಳೂರು : ಕಾಂಗ್ರೆಸ್ ಎಂಎಲ್ ಸಿ ಸಿಎಂ ಇಬ್ರಾಹಿಂ ಅವರು ಶೀಘ್ರದಲ್ಲಿಯೇ ಕಾಂಗ್ರೆಸ್ ತೊರೆಯಲಿದ್ದಾರೆ ಅನ್ನೋ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ಗುರುವಾರ ಸುದ್ದಿಗೋಷ್ಠಿ ನಡೆಸಿದ್ದ ಇಬ್ರಾಹಿಂ ಅವರು ಕಾಂಗ್ರೆಸ್ ನೊಂದಿಗೆ ನನ್ನ ಜರ್ನಿ ಮುಗಿದ ಅಧ್ಯಾಯ ಎಂದಿದ್ದಾರೆ.
ಈ ಬಗ್ಗೆ ಇಂದು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಹೊಗಲ್ಲ. ಅವರು ಎಲ್ಲಿಗೂ ಹೋಗಲ್ಲ.
ಬಹಳ ಸಾರಿ ಪಕ್ಷ ಬಿಡುವ ಬಗ್ಗೆ ಮಾತನಾಡಿದ್ದಾರೆ. ಕೋಪದಲ್ಲಿ ಆ ತರಹ ಮಾತನಾಡಿದ್ದಾರೆ. ನಾನು ಅವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ವಿಚಾರ ಇಲ್ಲಿಗೆ ಮುಗಿಯಿತು ಎಂಬ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಿಎಂ ಇಬ್ರಾಹಿಂ ಕೋಪದಲ್ಲಿ ಮಾತನಾಡಿದ್ದಾನೆ. ನಾನು ಸಮಾಧಾನ ಮಾಡುತ್ತೇನೆ.
ಪಕ್ಷ ಬಿಟ್ಟು ಹೋಗದ ಹಾಗೆ ನಾನು ಮಾತನಾಡುತ್ತೇನೆ. ಕೋಪ ತಣ್ಣಗಾದ ನಂತರ ಅವನೇ ನನಗಾಗಿ ಸ್ಪೆಷಲ್ ಬಿರಿಯಾನಿ ಮಾಡಿ ತಿನ್ನಲು ಕರೆದೇ ಕರೆಯುತ್ತಾನೆ ಎಂದು ಹಾಸ್ಯ ಚಟಾಕಿ ಹಾರಿಸಿದರು.