ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು : ಸಿದ್ದರಾಮಯ್ಯ
ರಾಮನಗರ : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ರದ್ದು ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 9 ರಂದು ಪಾದಯಾತ್ರೆ ಆರಂಭಿಸಿತ್ತು. ಆದ್ರೆ ಇಂದು ಕಾಂಗ್ರೆಸ್ ಪಾದಯಾತ್ರೆಯನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ನಮ್ಮ ತೀರ್ಮಾನದಂತೆ ಜನವರಿ 9ರಂದು ಸಂಗಮದಿಂದ ಪಾದಯಾತ್ರೆ ಪ್ರಾರಂಭ ಆಯ್ತು.
ನಮ್ಮ ಮುಖಂಡರು ಕಾರ್ಯಕರ್ತರು ಪಾದಯಾತ್ರೆ ಯಶಸ್ವಿಯಾಗಿ ಮಾಡಿದ್ದೇವೆ. ಇಂದಿನಿಂದ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಬೇಕಿತ್ತು.
ಕೋವಿಡ್ ವೇಗವಾಗಿ ಹರಡುತ್ತಿದೆ. ಇದರಿಂದ ಪಾದಯಾತ್ರೆ ಮೊಟಕುಗೊಳಿಸಿದ್ದೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಕೊರೊನಾ ಸೋಂಕು ಕಡಿಮೆ ಆದಮೇಲೆ ಮತ್ತೇ ರಾಮನಗರದಿಂದಲೇ ಪಾದಯಾತ್ರೆ ಪ್ರಾರಂಭಿಸುತ್ತೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 15 ಸಾವಿರ ಸೋಂಕು ಪಾದಯಾತ್ರೆಯಿಂದ ಪತ್ತೆಯಾಗಿಲ್ಲ. ದೇಶದ್ಯಾಂತ ಸ್ವಾಭಾವಿಕವಾಗಿ ಮೂರನೇ ಅಲೆ ಏರಿಕೆ ಆಗುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗಿದೆ ಎಂದಿದ್ದಾರೆ.