Siddaramaiah | ನಾವು ಮಾನವೀಯತೆ ದೃಷ್ಟಿಯಿಂದ ಕೊಟ್ಟಿದ್ದು
ಬಾಗಲಕೋಟೆ : ಪಾಪ, ಅವರಿಗೆ ದುಡ್ಡು ವಾಪಸ್ ಕೊಟ್ಟು ಕಳಿಸಿದ್ದೀವಿ. ಪುನಃ ಹಣ ವಾಪಸ್ ಕೊಟ್ಟದ್ದು ಹೇಳೋದಿಲ್ಲಾ..ನೀವು. ನಾವು ಮಾನವೀಯತೆ ದೃಷ್ಟಿಯಿಂದ ಕೊಟ್ಟಿದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ 2 ಲಕ್ಷ ರೂಪಾಯಿ ಪರಿಹಾರ ಧನವನ್ನು ಮಹಿಳೆಯೊಬ್ಬರು ಎಸೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬದಾಮಿ ಕ್ಷೇತ್ರದ ಕೆರೂರು ಗುಂಪು ಘರ್ಷಣೆ ಗಾಯಾಳುಗಳ ಭೇಟಿಗೆ ಬಾಗಲಕೋಟೆಗೆ ಆಗಮಿಸಿದ್ದರು.
ಈ ವೇಳೆ ಗಾಯಾಳುಗಳ ಸಂಬಂಧಿಕರು ನೀಡಿದ ಹಣವನ್ನ ಸಿದ್ದರಾಮಯ್ಯಗೆ ವಾಪಸ್ ನೀಡಲು ಮುಂದಾದರು. ನಮಗೆ ಹಣ ಬೇಡ, ನ್ಯಾಯ ಬೇಕು ಅಂತಾ ಆಕ್ರೋಶ ಹೊರಹಾಕಿದ್ದಾರೆ.
ಆಗ ಸಿದ್ದರಾಮಯ್ಯ ಕಾರು ಮುಂದೆ ಸಾಗಿದ್ದು, ಮಹಿಳೆ ಹಣವನ್ನ ಪೊಲೀಸ್ ಬೆಂಗಾವಲು ವಾಹನಕ್ಕೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಪಾಪ, ಅವರಿಗೆ ದುಡ್ಡು ವಾಪಸ್ ಕೊಟ್ಟು ಕಳಿಸಿದ್ದೀವಿ. ಪುನಃ ಹಣ ವಾಪಸ್ ಕೊಟ್ಟದ್ದು ಹೇಳೋದಿಲ್ಲಾ..ನೀವು. ನಾವು ಮಾನವೀಯತೆ ದೃಷ್ಟಿಯಿಂದ ಕೊಟ್ಟಿದ್ದು, ಅವರ ಕಷ್ಟಕ್ಕೆಲ್ಲಾ ಆಗುತ್ತೆ ಅಂತ ಅಲ್ಲ.
ಏನಾದ್ರೂ ಆದಾಗ ಸರ್ಕಾರದಿಂದ 1 ಲಕ್ಷ , 2 ಲಕ್ಷ ಪರಿಹಾರ ಕೊಡ್ತೀವಿ. ಸತ್ತದೋವರಿಗೂ ಪರಿಹಾರ ಕೊಟ್ಟಿರ್ತಿವಿ. ಸತ್ತೋದವರು ವಾಪಸ್ ಬರ್ತಾರಾ ಎಂದರು.
ಮಾನವೀಯತೆಯಿಂದ ಪರಿಹಾರ ನೀಡಿದ್ದು ಇದೆ. ಕಷ್ಟದಲ್ಲಿರೋರಿಗೆ ಅನುಕೂಲ ಆಗಲಿ ಅಂತ ಮಾಡಿದ್ದೀವಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.