ಜಮೀರ್ ಮನೆ ಮೇಲೆ ಇಡಿ ದಾಳಿ : ಸಿದ್ದರಾಮಯ್ಯ ಕಿಡಿ siddaramaiah
ಬೆಂಗಳೂರು : ಇಂದು ಬೆಳ್ಳಂ ಬೆಳಿಗ್ಗೆ ಇಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಶಾಕ್ ನೀಡಿದ್ದಾರೆ.
ಇಡಿ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ಇದನ್ನು ಕಾಂಗ್ರೆಸ್ ನಾಯಕರು ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ಮಾಜಿ ಸಚಿವ ಜಮೀರ್ ಅಹಮದ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ.
ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇತ್ತ ಕಳೆದ 8 ಗಂಟೆಯಿಂದ ಜಮೀರ್ ಮನೆಯಲ್ಲಿ ಇಡಿ ಅಧಿಕಾರಿಗಳು ತಲಾಶ್ ಮಾಡುತ್ತಿದ್ದು, ಮಹತ್ತರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.