“ಸಿದ್ದರಾಮಯ್ಯ ಅರ್ಜೆಂಟಾಗಿ ಮುಖ್ಯಮಂತ್ರಿ ಆಗಬೇಕಿದೆ” : ಈಶ್ವರಪ್ಪ Siddaramaiah
ಶಿವಮೊಗ್ಗ : ಸಿದ್ದರಾಮಯ್ಯನವರಿಗೆ ಅಜೆರ್ಂಟಾಗಿ ಮುಖ್ಯಮಂತ್ರಿ ಆಗಬೇಕಿದೆ. ಬಿಎಸ್ ವೈ ರಾಜೀನಾಮೆ ನೀಡಿದರೆ ತಾನು ಸಿಎಂ ಆಗಬಹುದು ಎಂಬ ಭ್ರಮೆಯಲ್ಲಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರಿಗೆ ಅಜೆರ್ಂಟಾಗಿ ಮುಖ್ಯಮಂತ್ರಿ ಆಗಬೇಕಿದೆ. ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾನು ಸಿಎಂ ಆಗಬಹುದು ಎಂಬ ಭ್ರಮೆಯಲ್ಲಿದ್ದಾರೆ.
ಆದರೆ ಬಿಎಸ್ ವೈ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಲ್ಲ. ಹಾಗಾಗಿ ಸಿದ್ದರಾಮಯ್ಯ ಕನಸು ಕಾಣುವುದು ಬೇಡ ಎಂದು ಹೇಳಿದರು.
ಇದೇ ವೇಳೆ ಸಿಎಂ ವಿರುದ್ಧ ದೂರು ವಿಚಾರವಾಗಿ ಮಾತನಾಡಿದ ಈಶ್ವರಪ್ಪ ನಾನು ಯಾರಿಗೂ ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ.
ನನ್ನ ಮಾತಿಗೆ ಬದ್ಧನಾಗಿದ್ದೇನೆ. ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವ ವಿಶ್ವಾಸವೂ ಇದೆ ಎಂದರು