Siddaramaiah | ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ
ಬೆಂಗಳೂರು : ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ, ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಈ ಧರಣಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಈ ನೆಲದ ದಾರ್ಶನಿಕರು, ಸಾಹಿತಿಗಳು, ಮಹಾಪುರುಷರಿಗೆ ಕಿಂಚಿತ್ತು ಅವಮಾನವಾದರೂ ಅದನ್ನು ನಾವು ಖಂಡಿತಾ ಸಹಿಸುವುದಿಲ್ಲ, ಅಂತಹಾ ಪಠ್ಯ ಪುಸ್ತಕ ಜಾರಿಯಾಗಲೂ ಬಿಡುವುದಿಲ್ಲ. ಪಠ್ಯಪುಸ್ತಕ ಮಕ್ಕಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಬೇಕು, ದ್ವೇಷ-ವೈಷಮ್ಯವನ್ನಲ್ಲ. ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದುಕೊಂಡಿದ್ದಾರೆ.
ಈ ನೆಲದ ದಾರ್ಶನಿಕರು, ಸಾಹಿತಿಗಳು, ಮಹಾಪುರುಷರಿಗೆ ಕಿಂಚಿತ್ತು ಅವಮಾನವಾದರೂ ಅದನ್ನು ನಾವು ಖಂಡಿತಾ ಸಹಿಸುವುದಿಲ್ಲ, ಅಂತಹಾ ಪಠ್ಯ ಪುಸ್ತಕ ಜಾರಿಯಾಗಲೂ ಬಿಡುವುದಿಲ್ಲ.
ಪಠ್ಯಪುಸ್ತಕ ಮಕ್ಕಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಬೇಕು, ದ್ವೇಷ-ವೈಷಮ್ಯವನ್ನಲ್ಲ.
ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ. pic.twitter.com/CxexySrJ6K— Siddaramaiah (@siddaramaiah) June 9, 2022
ಇನ್ನು ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.