ಮೋದಿ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ
ಬೆಂಗಳೂರು : 2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿ ಅವರು “ಕೊಡುಗೆ” ನೀಡಿದ್ದಾರೆ ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ.ಇದನ್ನು ಕೊಡುಗೆ ಎನ್ನಲು ಮೋದಿಯವರೊ ಇಲ್ಲ ಬಿಜೆಪಿಯವರೊ ಅವರ ಸ್ವಂತ ಮನೆಯಿಂದ ತೆಗೆದು ಗಿಫ್ಟು ಕೊಟ್ಟಿದ್ದಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಕಳೆದ 8 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ.
ರಾಜ್ಯದಿಂದ ಸಂಗ್ರಹವಾದ 19 ಲಕ್ಷ ಕೋಟಿ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ಕೆಲವು ಯೋಜನೆಗಳನ್ನು ಸೇರಿಸಿ ಒಟ್ಟು 1.29 ಲಕ್ಷ ಕೋಟಿ ಅನುದಾನವನ್ನು ರಾಜ್ಯಕ್ಕೆ ನೀಡಿದೆ.ಇದರಲ್ಲಿ ನರೇಗ ಯೋಜನೆಯಲ್ಲಿ ಜನರು ಕೂಲಿ ಮಾಡಿದ ಹಣ 27,418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ.
ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲಿ ನಮ್ಮ ರಾಜ್ಯ ಸತತವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. 4/19#8YrsOfFailure
— Siddaramaiah (@siddaramaiah) June 2, 2022
ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್ಟಿೆ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲಿ ನಮ್ಮ ರಾಜ್ಯ ಸತತವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ.
ನನ್ನ ಬಳಿಯಿರುವ ಆದಾಯ ತೆರಿಗೆ ಇಲಾಖೆಯ 2018-19 ರ ಅಧಿಕೃತ ದಾಖಲೆ ಪ್ರಕಾರ ಮಹಾರಾಷ್ಟ್ರ ರಾಜ್ಯವು ರೂ. 4.25 ಲಕ್ಷ ಕೋಟಿ ನೇರ ತೆರಿಗೆಯ ರೂಪದಲ್ಲಿ ಪಾವತಿಸಿದೆ. ದೆಹಲಿಯು ರೂ. 1.66 ಲಕ್ಷ ಕೋಟಿ ಪಾವತಿಸಿತ್ತು ಎಂದು ಬರೆದುಕೊಂಡಿದ್ದಾರೆ.
ಕಳೆದ 8 ವರ್ಷಗಳಲ್ಲಿ @narendramodi ಅವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ @BJP4India ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. 2/19#8YrsOfFailure
— Siddaramaiah (@siddaramaiah) June 2, 2022








