ಸಿದ್ದರಾಮಯ್ಯ ಕುಡುಕನಂತೆ ಮಾತನಾಡ್ತಿದ್ದಾರೆ : ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಸಿದ್ದರಾಮಯ್ಯ ರಸ್ತೆಯಲ್ಲಿ ಹೋಗುವ ಕುಡುಕ ಮಾತನಾಡುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಐಸಿಯುನಲ್ಲಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ ಕೆ.ಎಸ್.ಈಶ್ವರಪ್ಪ, ಅನೇಕ ಮಂದಿ ಮುಖ್ಯಮಂತ್ರಿ ಆಗಿದ್ದರು.
ಉಳಿದವರೆಲ್ಲರೂ ಸಹ ಏನು ಸಲಹೆ ಕೊಡಬೇಕೋ ಆ ಸಲಹೆ ಕೊಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ರಸ್ತೆಯಲ್ಲಿ ಹೋಗುವ ಕುಡುಕ ಮಾತನಾಡುವ ರೀತಿಯಲ್ಲಿ ಮಾತನಾಡ್ತಿದ್ದಾರೆ.
ವಿರೋಧ ಪಕ್ಷದ ನಾಯಕ ಎಂಬ ಘನತೆ ಮರೆತು, ಮುಖ್ಯಮಂತ್ರಿ ಆಗಿದ್ದೆ ಎಂಬ ಜ್ಞಾನ ಇಲ್ಲದ ಹಾಗೆ ಮಾತನಾಡ್ತಿದ್ದಾರೆ.
ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಆಗೋಕು ಅಯೋಗ್ಯ, ಮುಖ್ಯಮಂತ್ರಿ ಆಗೋದಕ್ಕು ಕೂಡ ಅಯೋಗ್ಯ ಎಂದು ಟೀಕಿಸಿದ್ದಾರೆ.
ಮುಖ್ಯಮಂತ್ರಿ ಆಗಿದ್ದ ವ್ಯಕ್ತಿ ಅಯೋಗ್ಯ ಎನ್ನೋದಕ್ಕೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಜನ ತೋರಿಸಿದ್ದಾರೆ.
ರಾಜ್ಯದ ಜನ ತೀರ್ಮಾನ ಮಾಡಿದರು. ಇವನು ಆಯೋಗ್ಯ, ಇವನ ಕೈಯಲ್ಲಿ ಸರ್ಕಾರ ಕೊಟ್ಟರೆ ಉಪಯೋಗ ಇಲ್ಲ.
ಇದಕ್ಕಾಗಿ ಅವನಿಗೆ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಬಿಸಾಕಿದರು. ಈಗ ಆ ಜ್ಞಾನನೂ ಇಲ್ಲದ ಹಾಗೆ ಮುಖ್ಯಮಂತ್ರಿ ಅವರನ್ನು ಟೀಕೆ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.