Siddaramaiah | ನೆಹರು ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಹೇಡಿ ಅಲ್ಲ
ಬೆಂಗಳೂರು : ಪಂಡಿತ ಜವಾಹರಲಾಲ್ ನೆಹರೂ ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರದ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರು ಫೋಟೋ, ಹೆಸರು ಕೈಬಿಟ್ಟಿರುವುದನ್ನ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ @BSBommai.
4/7 pic.twitter.com/v0PIdiuwAN— Siddaramaiah (@siddaramaiah) August 14, 2022
ಸನ್ಮಾನ್ಯ ಬಸವರಾಜ ಬೊಮ್ಮಾಯಿ ಅವರೇ ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.
ಆರ್ ಎಸ್ ಎಸ್ ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ ಬಸವರಾಜ ಬೊಮ್ಮಾಯಿ ಎಂದು ಕಿಡಿಕಾರಿದ್ದಾರೆ.
ಸನ್ಮಾನ್ಯ @BSBommai ಅವರೇ ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.
2/7 pic.twitter.com/W8zYXyM9b4— Siddaramaiah (@siddaramaiah) August 14, 2022
ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ ಬಸವರಾಜ ಬೊಮ್ಮಾಯಿ ಎಂದು ಟೀಕಿಸಿದ್ದಾರೆ.