ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂದು ಹೇಳುತ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲಾಕ್ ಡೌನ್ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟವಾಗಿ ಹೇಳಿದೆ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ. ಬದಲಾಗಿ ಸೀಲ್ ಡೌನ್ ಮಾಡಲಾಗುತ್ತದೆ ಎಂದು . ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆ ನಡೆಸಿತ್ತು. ಇದಾದ ಬಳಿಕ ಸಚಿವ ಆರ್ ಅಶೋಕ್ ನೋ.ಲಾಕ್ ಡೌನ್, ನೋ ಲಾಕ್ ಡೌನ್ ಎಂದು ಹೇಳಿದ್ದಾರೆ.
ಇನ್ನೂ ಲಾಕ್ ಡೌನ್ ವಿಚಾರವಾಗಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪೂರ್ವಸಿದ್ಧತೆ ಇಲ್ಲದೆ ಪ್ರಾರಂಭದಲ್ಲಿ ಲಾಕ್ಡೌನ್ ಘೋಷಿಸಿದ್ದರಿಂದ ಜನರ ಆರೋಗ್ಯ ಮತ್ತು ರಾಜ್ಯದ ಆರ್ಥಿಕತೆ ಎರಡೂ ಹಾಳಾಯ್ತು. ಈಗ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವಾಗ ಲಾಕ್ಡೌನ್ ಆಗಬೇಕಾಗಿದೆ ಎಂದು ಹೇಳಿದ್ದಾರೆ.