ಕೋಲಾರದಲ್ಲಿ ಸಿದ್ದರಾಮಯ್ಯರನ್ನ ನೋಡಲು ಮುಗಿಬಿದ್ದ ಜನರು Siddaramaiah saaksha tv
ಕೋಲಾರ : ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದರು. ಈ ವೇಳೆ ಅವರನ್ನು ನೋಡಲು ಜನರು ಮುಗಿದಿದ್ದರು. ಜಿಲ್ಲೆಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಬಳಿಕ ಸಿದ್ದರಾಮಯ್ಯನವರು ಕಳೆದ 40 ವರ್ಷಗಳಿಂದ ನೀರಿಲ್ಲದೆ ಬತ್ತಿದ್ದ ಮಾಲೂರು ತಾಲೂಕಿನ ದೊಡ್ಡ ಶಿವಾರ ಗ್ರಾಮದ ಕೆರೆಗೆ ಬಾಗೀನ ಅರ್ಪಿಸಿದರು.
ಈ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಅವರು, ಕಳೆದ 40 ವರ್ಷಗಳಿಂದ ನೀರಿಲ್ಲದೆ ಬತ್ತಿದ್ದ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ದೊಡ್ಡ ಶಿವಾರ ಗ್ರಾಮದ ಕೆರೆ ಈಗ ಸಂಪೂರ್ಣ ಭರ್ತಿಯಾಗಿದ್ದು, ಇಂದು ಗ್ರಾಮಸ್ಥರ ಹರ್ಷೋದ್ಗಾರದ ನಡುವೆ ಕೆರೆಗೆ ಬಾಗೀನ ಅರ್ಪಿಸಿದೆ. ನಮ್ಮ ಸರ್ಕಾರ ಜಾರಿಗೆ ತಂದಿದ್ದ ಕೆ.ಸಿ. ವ್ಯಾಲಿ ಯೋಜನೆ ಇದಕ್ಕೆ ಕಾರಣವೆಂಬುದು ಹೆಮ್ಮೆಯ ವಿಚಾರ.
ಸಂಸ್ಕರಿಸಿದ ತ್ಯಾಜ್ಯ ನೀರಿನ ಮೂಲಕ ಕೋಲಾರ ಜಿಲ್ಲೆಯ 126 ಕೆರೆಗಳನ್ನು ತುಂಬಿಸುವುದು ಕೆ.ಸಿ ವ್ಯಾಲಿ ಯೋಜನೆಯ ಉದ್ದೇಶವಾಗಿತ್ತು.
ನಮ್ಮ ಈ ಯೋಜನೆ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ಮೂಲಕ ಈ ಭಾಗದ ರೈತರಿಗೆ ವರದಾನವಾಗಿ ಪರಿಣಮಿಸಿದೆ ಎಂದು ಬರೆದುಕೊಂಡಿದ್ದಾರೆ.
ಹಾಗೆ ಕೋಲಾರ ಜಿಲ್ಲೆಯ ಮಾಲೂರಿಗೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ದೊರೆತ ಅದ್ದೂರಿ ಸ್ವಾಗತ.
ತಾವು ನನ್ನ ಮೇಲಿಟ್ಟಿರುವ ಈ ಪ್ರೀತಿ ವಿಶ್ವಾಸ ತಮ್ಮ ಸೇವೆ ಮಾಡುವ ನನ್ನ ಉತ್ಸಾಹವನ್ನು ಬತ್ತದಂತೆ ಮಾಡಿದೆ. ತಮ್ಮ ಪ್ರೀತಿ, ಅಭಿಮಾನಕ್ಕೆ ನಾನು ಸದಾ ಋಣಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.