ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಜಾತಿಗಣತಿ ಗುಮ್ಮ- ಅಧಿಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯರ ಜಾತಿ ಅಸ್ತ್ರ: ಇದು ಸಮಾಜ ಒಡೆಯುವ ಹುನ್ನಾರವೆಂದ ಸುನಿಲ್ ಕುಮಾರ್

Siddaramaiah's caste is a weapon to retain power: This is a plan to divide society, says Sunil Kumar

Shwetha by Shwetha
October 1, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ಕೇವಲ ಸಮಾಜದ ಹಿತಕ್ಕಾಗಿ ಅಲ್ಲ, ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ವಿಸ್ತರಿಸಿಕೊಳ್ಳಲು ಬಳಸುತ್ತಿರುವ ರಾಜಕೀಯ ಅಸ್ತ್ರ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರದ ಜಾತಿಗಣತಿ ನಡೆಗೆ ಭಾರತೀಯ ಜನತಾ ಪಕ್ಷವು ಎಂದಿಗೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಯಾವುದೇ ಪೂರ್ವಸಿದ್ಧತೆಗಳಿಲ್ಲದೆ, ಅವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಹೊರಟಿರುವುದಕ್ಕೆ ನಮ್ಮ ತೀವ್ರ ಆಕ್ಷೇಪವಿದೆ ಎಂದು ಅವರು ಸ್ಪಷ್ಟಪಡಿಸಿದರು.

Related posts

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

July 28, 2026
ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

‘KPSCಯಲ್ಲಿ ₹800 ಕೋಟಿ ಡೀಲ್ ನಡೆದಿದೆ’: ಆರ್. ಅಶೋಕ್ ಆರೋಪ

July 28, 2026

ಸಿದ್ದರಾಮಯ್ಯ ಅಧಿಕಾರ ವಿಸ್ತರಣೆಗಾಗಿ ಸಮೀಕ್ಷೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ “ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ” ಎಂಬ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸುನಿಲ್ ಕುಮಾರ್, “ಈ ಸಮೀಕ್ಷೆಯಿಂದ ರಾಜ್ಯದ ಜನತೆಗಾಗಲಿ ಅಥವಾ ಸರ್ಕಾರಕ್ಕಾಗಲಿ ಯಾವುದೇ ಪ್ರಯೋಜನವಿಲ್ಲ. ಇದರ ಏಕೈಕ ಲಾಭ ಪಡೆಯುವವರು ಮುಖ್ಯಮಂತ್ರಿ ಸಿದ್ದರಾಮಯ್ಯ. ನವೆಂಬರ್‌ನಲ್ಲಿ ಅವರ ಮುಖ್ಯಮಂತ್ರಿ ಅವಧಿ ಮುಗಿಯಲಿದೆ ಎಂಬ ಮಾತುಗಳಿವೆ. ಅದಕ್ಕಾಗಿಯೇ ಅವರು ತರಾತುರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮೇಲೆ ಒತ್ತಡ ಹೇರಿ ಈ ಸಮೀಕ್ಷೆ ಮಾಡಿಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದರು.

ಶಿಕ್ಷಕರನ್ನು ಅಮಾನತು ಮಾಡುವುದಲ್ಲ, ಮುಖ್ಯಮಂತ್ರಿಯನ್ನೇ ಅಮಾನತುಗೊಳಿಸಿ

ಪೂರ್ವತಯಾರಿ ಇಲ್ಲದೆ ಸಮೀಕ್ಷೆ ನಡೆಸುತ್ತಿರುವುದರಿಂದ ಕ್ಷೇತ್ರಕಾರ್ಯದಲ್ಲಿ ನಿರತರಾಗಿರುವ ಶಿಕ್ಷಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಮೀಕ್ಷೆ ಮಾಡದಿದ್ದರೆ ಅವರನ್ನು ಅಮಾನತು ಮಾಡುವ ಬೆದರಿಕೆ ಹಾಕಲಾಗುತ್ತಿದೆ. ನಿಜವಾಗಿ ಅಮಾನತು ಮಾಡಬೇಕಿರುವುದು ಅಮಾಯಕ ಶಿಕ್ಷಕರನ್ನಲ್ಲ, ಬದಲಾಗಿ ಇಂತಹ ಅವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸಮಾಜ ಒಡೆದು ಆಳುವ ನೀತಿಗೆ ನಮ್ಮ ವಿರೋಧ

ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವೇನಲ್ಲ ಎಂದು ನ್ಯಾಯಾಲಯವೇ ಸ್ಪಷ್ಟಪಡಿಸಿದೆ. ಹೀಗಾಗಿ, ಇದರಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯದ ಜನರ ವಿವೇಚನೆಗೆ ಬಿಡುತ್ತೇವೆ. ಆದರೆ, ಯಾವುದೇ ಸಿದ್ಧತೆ ಇಲ್ಲದೆ ಸಂಗ್ರಹಿಸುವ ಮಾಹಿತಿಗಳು ಮತ್ತು ವೈಯಕ್ತಿಕ ಡೇಟಾ ಸೋರಿಕೆಯಾಗುವುದಿಲ್ಲ ಎಂದು ಸರ್ಕಾರದ ಬಳಿ ಯಾವ ಖಾತ್ರಿ ಇದೆ? ಎಂದು ಸುನಿಲ್ ಕುಮಾರ್ ಪ್ರಶ್ನಿಸಿದರು. “ಸಿದ್ದರಾಮಯ್ಯನವರು ಈ ಸಮೀಕ್ಷೆಯ ಮೂಲಕ ಸಮಾಜವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ,” ಎಂದರು.

ಹಿಂದಿನ ವರದಿಗಳಂತೆ ಇದೂ ಮೂಲೆಗುಂಪು

ಈ ಸಮೀಕ್ಷೆಯನ್ನು ನೂರಾರು ಸಂಘ-ಸಂಸ್ಥೆಗಳು ವಿರೋಧಿಸಿವೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸರ್ಕಾರ ಬಿಡುತ್ತಿಲ್ಲ. ಈ ಹಿಂದೆ ಸಿದ್ಧಪಡಿಸಲಾದ ಕಾಂತರಾಜ್ ವರದಿ, ಜಯಪ್ರಕಾಶ್ ಹೆಗಡೆ ವರದಿಯನ್ನು ಹೇಗೆ ಮೂಲೆಗುಂಪು ಮಾಡಲಾಯಿತೋ, ಅದೇ ರೀತಿ ಈ ಸಮೀಕ್ಷೆಯ ವರದಿಯೂ ಧೂಳು ಹಿಡಿಯಲಿದೆ ಎಂದು ಅವರು ಭವಿಷ್ಯ ನುಡಿದರು.

“ನಾವು ‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’ ತತ್ವಕ್ಕೆ ಬದ್ಧರಾಗಿದ್ದೇವೆ. ಆದರೆ ಸಿದ್ದರಾಮಯ್ಯನವರದ್ದು ‘ಸಿದ್ದರಾಮಯ್ಯ ಕಾ ಸಾಥ್, ಸಿದ್ದರಾಮಯ್ಯ ಕಾ ವಿಕಾಸ್’ ಅಷ್ಟೇ. ಅವರ ಗುರಿ ಸಮ ಸಮಾಜ ನಿರ್ಮಾಣವಲ್ಲ, ಬದಲಾಗಿ ಸಮಾಜ ಒಡೆಯುವುದು. ಅವರ ಸಮ ಸಮಾಜದ ಮಾತುಗಳು ಕೇವಲ ಭಾಷಣಕ್ಕೆ ಸೀಮಿತ. ಸಿದ್ದರಾಮಯ್ಯ ಆತ್ಮವಂಚನೆ ಮಾಡಿಕೊಳ್ಳುತ್ತಿದ್ದಾರೆ,” ಎಂದು ಸುನಿಲ್ ಕುಮಾರ್ ತೀವ್ರವಾಗಿ ಟೀಕಿಸಿದರು.

ShareTweetSendShare
Join us on:

Related Posts

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

by Shwetha
July 28, 2026
0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

‘KPSCಯಲ್ಲಿ ₹800 ಕೋಟಿ ಡೀಲ್ ನಡೆದಿದೆ’: ಆರ್. ಅಶೋಕ್ ಆರೋಪ

by Shwetha
July 28, 2026
0

ವಿಧಾನಸೌಧದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, KPSC ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ...

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ  ಮಾಗಡಿ ಬಾಲಕೃಷ್ಣ

ಕಾಂಗ್ರೆಸ್ ಗೆ ಬಿಜೆಪಿ ಎದುರಾಳಿಯೇ ಅಲ್ಲ -ಬಿಜೆಪಿಯ ಅಸ್ತಿತ್ವ ನಗಣ್ಯ ಜೆಡಿಎಸ್ ಪಾದಕ್ಕೆ ಕೇಸರಿ ಬಾವುಟ ಅರ್ಪಣೆ: ಮಾಗಡಿ ಬಾಲಕೃಷ್ಣ ಲೇವಡಿ

by Shwetha
July 28, 2026
0

ರಾಮನಗರ: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಂತರ ಕೇಸರಿ ಪಡೆ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದ್ದು, ಎಲ್ಲವನ್ನೂ ದೇವೇಗೌಡರ ಕುಟುಂಬದ ಕೈಗೆ ಒಪ್ಪಿಸಿ ಶರಣಾಗಿದೆ ಎಂದು...

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

by Shwetha
July 28, 2026
0

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ...

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

by Shwetha
July 28, 2026
0

ಹೊಸದೆಹಲಿ: ರಾಜಕೀಯ ಹೋರಾಟಗಳು ಮತ್ತು ಪ್ರತಿಭಟನೆಗಳು ಮುಗಿದ ನಂತರ ನಾಯಕರು ಕಾರ್ಯಕರ್ತರನ್ನು ಹೇಗೆ ಬಳಸಿಕೊಂಡು ಬಿಸಾಡುತ್ತಾರೆ ಎಂಬುವುದಕ್ಕೆ ಈಗ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿದೆ. ನೀಟ್ ವಿದ್ಯಾರ್ಥಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram