ಮೇಕೆದಾಟು : ಬೊಮ್ಮಾಯಿ ಗಟ್ಟಿ ನಿರ್ಧಾರಕ್ಕೆ ನಮ್ಮ ಬೆಂಬಲ , ಆದ್ರೆ ಒಡಕು ಬಾಯಿಗಳನ್ನ ಮುಚ್ಚಿಸಿ – ಸಿದ್ದರಾಮಯ್ಯ
ಮೇಕೆದಾಟು ಯೋಜನೆ ವಿಚಾರದಲ್ಲಿ ಬಿಜೆಪಿ ನಾಯಕರು ಎರೆಡೆರೆಡು ನಾಲಿಗೆಯಿಂದ ಮಾತನಾಡುತ್ತಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.. ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ಮೇಕೆದಾಟು ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಳೆದಿರುವ ಗಟ್ಟಿನಿಲುವಿಗೆ ನಮ್ಮ ಬೆಂಬಲವಿದೆ.
ಆದರೆ ಈ ಯೋಜನೆ ಕುರಿತು ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಬೇಕು. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲಿಸುತ್ತಿದ್ದಾರೆ.ಯಾಕೆ ಈ ದಂದ್ವ ನೀತಿ..? ಎಂದು ಪ್ರಶ್ನಿಸಿದ್ದಾರೆ.
ನೆಹರು ಕುಟುಂಬದ ತ್ಯಾಗ ದೊಡ್ಡದು. ಅವರಂತೆ ಯಾರು ಕೂಡ ತ್ಯಾಗ ಮಾಡಿಲ್ಲ : ಡಿಕೆಶಿ
ಅಲ್ಲದೇ ಮೇಕೆದಾಟು ಬಗ್ಗೆ ಸಿಎಂ ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ, ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿ ಮುಚ್ಚಿಸದೆ ಹೋದರೆ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಿ.ಟಿ ವಿರುದ್ಧ ಖಾರವಾಗಿ ವಾಗ್ದಾಳಿ ನಡೆಎಸಿದ್ದಾರೆ.
ಅಲ್ಲದೇ ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ಕುವೆಂಪು ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಪ್ರಾಯ ಇದ್ದರೆ ಅದನ್ನು ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ ತಿಳಿಸಿದ್ದಾರೆ..
ಜೊತೆಗೆ ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯವನ್ನಾಗಲಿ, ರಾಜಿಯನ್ನಾಗಲಿ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದಿರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು ಎಂದು ಸಿಎಂ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ ಕೇಂದ್ರದ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ ಅವರು ಕೇಂದ್ರ ಮೇಕೆದಾಟು ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಡುವುದನ್ನು ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ರೀತಿಯಲ್ಲಿ ಇಲ್ಲಿಯೂ ರಾಜಕೀಯ ಮಾಡಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.








