ಕೋಲಾರ : ಸಿಎಂ ಸಿದ್ದರಾಮಯ್ಯ ಅವರು ಸಾಲವನ್ನೂ ಮನ್ನಾ ಮಾಡುತ್ತೇನೆ ಅಂತ ಹೇಳಿದ್ದರು. ನಾವು ಕಟ್ಟುವುದಿಲ್ಲ ಎಂದು ಮಹಿಳೆಯರಿ ಸಾಲ ವಸೂಲಾತಿಗೆ ಬಂದವರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಡಿಸಿಸಿ ಬ್ಯಾಂಕ್ನಿಂದ (DCC Bank) ಸಾಲ (Loan) ಮರುಪಾವತಿಸುವಂತೆ ತಿಳಿಸಲು ಹೋದ ಅಧಿಕಾರಿಗಳಿಗೆ ಮಹಿಳೆಯರು ತರಾಟೆ ತೆಗೆದುಕೊಳ್ಳುತ್ತಿರುವ ಘಟನೆಯೊಂದು ಕೋಲಾರ (Kolar) ಜಿಲ್ಲೆಯಲ್ಲಿ ವರದಿಯಾಗಿದೆ.
ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳ (Congress Guarantee) ಜೊತೆಗೆ ಮಹಿಳೆಯರಿಗೆ ಸಿದ್ದರಾಮಯ್ಯ (Siddaramaiah) ನೀಡಿದ್ದ ಮತ್ತೊಂದು ಭರವಸೆ ಈ ಮೂಲಕ ಈಗ ಸದ್ದು ಮಾಡುತ್ತಿದೆ. ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿದ್ದರು. ಸದ್ಯ ಮಹಿಳೆಯರು ಸಾಲ ತುಂಬಿಸಿಕೊಳ್ಳಲು ಬಂದವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಐದು ಲಕ್ಷದವರೆಗಿನ ಬಡ್ಡಿ ರಹಿತವಾಗಿ ನೀಡಿದ ಸಾಲವನ್ನು ಮನ್ನಾ ಮಾಡುವುದಾಗಿ ಕೋಲಾರದಲ್ಲಿ ಸಿದ್ದರಾಮಯ್ಯ ಮೊದಲು ಘೋಷಣೆ ಮಾಡಿದ್ದರು. ಸಾಲದ ಮೊತ್ತವನ್ನು ಮಹಿಳಾ ಸ್ವಸಹಾಯ ಗುಂಪುಗಳಿಗೆ 1 ಲಕ್ಷ ರೂ. ನಷ್ಟು ಹೆಚ್ಚಿಗೆ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಮಹಿಳೆಯರು ಇದನ್ನು ಕೇಳುತ್ತಿದ್ದಾರೆ.