ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಾರ ನೌಕರರನ್ನು ತನ್ನ ಗುಲಾಮರನ್ನಾಗಿ ಭಾವಿಸಿದೆ : ಸಿದ್ದರಾಮಯ್ಯ

admin by admin
November 7, 2020
in Newsbeat, Politics, ರಾಜಕೀಯ
Siddaramaiah JDS
Share on FacebookShare on TwitterShare on WhatsappShare on Telegram

ಸರ್ಕಾರ ನೌಕರರನ್ನು ತನ್ನ ಗುಲಾಮರನ್ನಾಗಿ ಭಾವಿಸಿದೆ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರವು ನೌಕರರನ್ನು ತನ್ನ ಗುಲಾಮರು, ಸ್ವತಂತ್ರ ವ್ಯಕ್ತಿತ್ವವಿಲ್ಲದ ರೋಬೋಟುಗಳು ಎಂದು ಭಾವಿಸಿದೆ ಎಂದು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೊರಡಿಸಿರುವ ಕರ್ನಾಟಕ ಸೇವಾ ಅಧಿನಿಯಮದ ಕರಡು ಅಧಿಸೂಚನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

Siddramaiah

ಅಲ್ಲದೇ ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದು ಟೀಕಿಸಿದ್ದಾರೆ.

ಪತ್ರದ ಸಂಪೂರ್ಣ ವಿವವರ ಇಲ್ಲಿದೆ.

ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ದಿನಾಂಕ 27/10/2020 ರಂದು ಕರ್ನಾಟಕ ಸೇವಾ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ಕ್ಕೆ ನಡತೆ-ನಿಯಮಗಳನ್ನು ತರಲು ಉದ್ದೇಶಿಸಿ ಕರಡು ಅಧಿಸೂಚನೆ ಹೊರಡಿಸಿದೆ. ಸದರಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಗಮನಿಸಿದಾಗ, ಸರಕಾರವು ನೌಕರರನ್ನು ತನ್ನ ಗುಲಾಮರು, ಸ್ವತಂತ್ರ ವ್ಯಕ್ತಿತ್ವವಿಲ್ಲದ ರೋಬೋಟುಗಳು ಎಂದು ಭಾವಿಸಿದ ಹಾಗೆ ಕಾಣುತ್ತಿದೆ.

ನಿಯಮ 10 ರಲ್ಲಿನ ಉಪನಿಯಮಗಳು ಒಂದಕ್ಕೊಂದು ಸಂಪೂರ್ಣವಾಗಿ ವಿರೋಧಾಭಾಸಗಳಿಂದ ಕೂಡಿವೆ. ಒಂದು ಕಡೆ, ಏನೇ ಚಟುವಟಿಕೆಗಳನ್ನು ನಡೆಸಬೇಕೆಂದರೂ, ಏನೇ ಬರೆಯಬೇಕೆಂದರೂ, ಏನೇ ಮಾತನಾಡಬೇಕೆಂದರೂ, ಪ್ರಕಟಿಸಬೇಕೆಂದರೂ ಪೂರ್ವಾನುಮತಿ ಪಡೆಯುವುದು ಅಗತ್ಯ ಎಂದು ಹೇಳಲಾಗುತ್ತದೆ. ಅದೇ ಅಧಿನಿಯಮದ ಇನ್ನೊಂದು ಉಪನಿಯಮದಲ್ಲಿ ಇದಕ್ಕೆ ಸಂಪೂರ್ಣ ವಿರುದ್ಧವಾದ ನಿಲುವು ಇದೆ.

ಸವದಿಯ `ಮೂರು ಬಾಗಿಲು’ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ

ಸಮಾಜದಲ್ಲಿ ಜ್ಞಾನ-ವಿಜ್ಞಾನ ದ್ವೇಷಿಯಾದ ವಾತಾವರಣ ನಿಧಾನವಾಗಿ ವ್ಯಾಪಿಸುತ್ತಿದೆ. ವಿಶ್ವ ವಿದ್ಯಾಲಯಗಳಲ್ಲಿ ನಡೆಯಬೇಕಾದಷ್ಟು ಪ್ರಮಾಣದಲ್ಲಿ ಸಂಶೋಧನೆ, ಅಧ್ಯಯನಗಳು ನಡೆಯುತ್ತಿಲ್ಲ. ಗುಣಮಟ್ಟದ ಪ್ರಕಟಣೆ ಆಗುತ್ತಿಲ್ಲ. ಕಾಲೇಜುಗಳಲ್ಲೂ ಇದೇ ರೀತಿಯ ವಾತಾವರಣವಿದೆ. ನಮ್ಮಲ್ಲಿ ಸಮಾಜ ವಿಜ್ಞಾನ, ಸಾಹಿತ್ಯ, ವಿಜ್ಞಾನ, ರಾಜಕೀಯ, ಆರ್ಥಿಕತೆ, ಪರಿಸರ ಮುಂತಾದ ವಿಚಾರಗಳಲ್ಲಿ ಅತ್ಯಂತ ಕಳಪೆ ಎನ್ನುವ ಕೆಲಸಗಳು ನಡೆಯುತ್ತಿವೆ ಎಂಬ ಜಾಗತಿಕ ಮಟ್ಟದ ವರದಿ/ಸಮೀಕ್ಷೆಗಳು ಪ್ರಕಟವಾಗುತ್ತಿವೆ. ಜ್ಞಾನ ವಿಜ್ಞಾನ ಕ್ಷೇತ್ರಗಳಲ್ಲಿ ಅವನತಿಗೊಂಡ ಸಮಾಜವು ಯಾವ ರೀತಿಯಲ್ಲೂ ಏಳಿಗೆ ಆಗಲು ಸಾಧ್ಯವಿಲ್ಲ. ಪ್ರಪಂಚದ ನೂರು ವಿಜ್ಞಾನ ನಗರಗಳಲ್ಲಿ ಬೆಂಗಳೂರು 95 ನೇ ಸ್ಥಾನದಲ್ಲಿದೆ ಎಂಬುದು ನಮಗೆಲ್ಲಾ ನಾಚಿಕೆ ತರಿಸುವ ಸಂಗತಿಯಾಗಿದೆ. ನೌಕರರು, ಉಪನ್ಯಾಸಕರು, ಪ್ರಾಧ್ಯಾಪಕರುಗಳು ತಮ್ಮ ಉದ್ಯೋಗವನ್ನು ನಿಷ್ಠೆಯಿಂದ ಮಾಡುವುದರ ಜತೆಗೆ ಸಂವಿಧಾನದ ಆಶಯಗಳಿಗೆ ಧಕ್ಕೆ ಆಗದಂತೆ ಮುಕ್ತವಾಗಿ ಜ್ಞಾನ ವಿಜ್ಞಾನಗಳ ಬೆಳವಣಿಗೆಗೆ ಸರಕಾರವು ಅದಕ್ಕೆ ಪೂರಕವಾಗಿ ಕೆಲಸ ಮಾಡಲು ಅಗತ್ಯವಾದ ವಾತಾವರಣವನ್ನು ನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಇದೆ.

ಬ್ರಿಟಿಷ್ ಆಡಳಿತವಿದ್ದಾಗ ಮತ್ತು ಆ ನಂತರದಲ್ಲೂ ಸಹ ನಮ್ಮ ರಾಜ್ಯದಲ್ಲಿ ಅತ್ಯತ್ತಮವಾದ ಸಾಹಿತ್ಯ, ಸಮಾಜ ವಿಜ್ಞಾನ, ವಿಜ್ಞಾನಗಳ ಕೆಲಸಗಳು ನಡೆದಿವೆ. ಭಾರತ ಆಡಳಿತ ಸೇವೆಗೆ ಸೇರಿದ್ದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಕರ್ನಾಟಕ ಆಡಳಿತ ಸೇವೆಯಲ್ಲಿದ್ದ ತೀ.ನಂ.ಶ್ರೀಕಂಠಯ್ಯ, ಎಚ್.ಎಲ್.ನಾಗೇಗೌಡರು, ನವರತ್ನ ರಾಮರಾಯರು ಮುಂತಾದ ಅನೇಕ ಗಣ್ಯರಿದ್ದಾರೆ. ಅದೇ ರೀತಿ ಅತ್ಯಂತ ಶ್ರೇಷ್ಠ ಸಂಶೋಧನೆಗಳನ್ನು ಮಾಡಿದ ಶಂ.ಬಾ.ಜೋಶಿಯವರು ಶಿಕ್ಷಕರಾಗಿದ್ದರು. ಕನ್ನಡ ಸಂಸ್ಕøತಿ ಮತ್ತು ಕನ್ನಡಿಗರ ಅರಿವನ್ನು ವಿಸ್ತರಿಸುವಲ್ಲಿ ಗಮನಾರ್ಹ ಕೆಲಸ ಮಾಡಿರುವ ಕುವೆಂಪು, ಬೇಂದ್ರೆ ಹಾಗೂ ಮುಂತಾದವರು ಶಾಲಾ-ಕಾಲೇಜು-ವಿಶ್ವ ವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರುಗಳಾಗಿದ್ದರು. ಇಂತಹವರಿಗೆ ಬರೆಯಬೇಡಿ, ಚಿಂತಿಸಬೇಡಿ, ಸಂಶೋಧನೆ ಮಾಡಬೇಡಿ, ಮಾಡುವುದಿದ್ದರೆ ಅನುಮತಿ ಪಡೆಯಲು ಗುಮಾಸ್ತರುಗಳ ಮುಂದೆ ನಿಂತು ಹಲ್ಲುಗಿಂಜಿ ಎಂದಿದ್ದರೆ ಕನ್ನಡ ಸಾಹಿತ್ಯ, ಸಂಸ್ಕøತಿಗಳ ಪರಿಸ್ಥಿತಿ ಏನಾಗುತ್ತಿತ್ತು ಎಂದು ಯೋಚಿಸಿ ನೋಡಿ.

ಹನೂರು ಪಟ್ಟಣ ಪಂಚಾಯಿತಿ : ಅಧಿಕಾರಕ್ಕಾಗಿ ಕಾಂಗ್ರೆಸ್-ಬಿಜೆಪಿ ಮೈತ್ರಿ

ಈಗಲೂ ಸಾಂಸ್ಕೃತಿಕವಾಗಿ ಮತ್ತು ವೈಜ್ಞಾನಿಕವಾಗಿ ಮೇಲ್ಪಂಕ್ತಿ ಆಗುವ ಕೆಲವು ವಿದ್ವಾಂಸರು ವಿಶ್ವ ವಿದ್ಯಾಲಯಗಳಲ್ಲಿ, ಕಾಲೇಜುಗಳಲ್ಲಿ ಇದ್ದಾರೆ. ಮತ್ತೆ ಕೆಲವರು ಸರಕಾರಿ ನೌಕರಿಗಳಲ್ಲೂ ಇದ್ದಾರೆ. ಅದೇ ರೀತಿ ಬರೆಯಬೇಡಿ, ಓದಬೇಡಿ, ಸಂಶೋಧನೆ ಮಾಡಬೇಡಿ ಎಂದರೆ ಸಂಭ್ರಮಿಸುವ, ಖುಷಿಪಡುವ ದಡ್ಡರೂ, ಸೋಮಾರಿಗಳೂ ಇದ್ದಾರೆ. ಸರಕಾರ ತರಲು ಹೊರಟಿರುವ ನಿಯಮಗಳು ಇಂಥವರಿಗೆ, ತೂಕಡಿಸುತ್ತಿದ್ದವರಿಗೆ ಹಾಸಿಗೆ ಹಾಸಿ ಕೊಟ್ಟಂತಾಗುತ್ತದೆ’. ಸೋಮಾರಿಗಳ ಕಿವಿ ಹಿಂಡಿ ಸಂಶೋಧನೆ , ಅಧ್ಯಯನಗಳಲ್ಲಿ ಗಂಭೀರವಾಗಿ ತೊಡಗುವಂತೆ ಮಾಡಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಉತ್ತಮ ಕೆಲಸ ಮಾಡುತ್ತಿರುವವರನ್ನು ಮತ್ತಷ್ಟು ಬೆನ್ನು ತಟ್ಟಿ ಪೆÇ್ರೀತ್ಸಾಹಿಸಬೇಕಾಗಿದೆ. ಸರ್ಕಾರಗಳು ಅಧ್ಯಯನ ಮತ್ತು ಸಂಶೋಧನೆಗಳನ್ನು ಪೆÇ್ರೀತ್ಸಾಹಿಸುವ ಬದಲು ನಿಷ್ಕ್ರಿಯಗೊಳಿಸಲು ಹೊರಟಿರುವುದು ಸಾಮಾಜಿಕ ಏಳಿಗೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದ ಸಂಗತಿಯಾಗಿದೆ.

ಆದ್ದರಿಂದ ಸಂವಿಧಾನದ ಆಶಯಗಳನ್ನು ಗೌರವಿಸಿ ಅದಕ್ಕೆ ಬದ್ದವಾಗಿ ನಡೆದುಕೊಂಡು, ಯಾವುದೇ ರೀತಿಯ ಸಾಹಿತ್ಯ, ಸಂಶೋಧನೆ, ಅಧ್ಯಯನಗಳಲ್ಲಿ ತೊಡಗಿಸಿಕೊಳ್ಳಲು ಪೂರಕವಾದ ವಾತಾವರಣ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸುತ್ತೇನೆ.

ಕನ್ನಡದ ಕೆಲಸಕ್ಕಾಗಿ, ಏಳಿಗೆಗಾಗಿ ನಮ್ಮ ಸರ್ಕಾರ ಬದ್ಧ : ಬಿಎಸ್ ವೈ

ಅದೇ ರೀತಿಯಲ್ಲಿ ಸರ್ಕಾರಿ ನೌಕರರ ಕುಟುಂಬದವರು ಕೂಡ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎನ್ನುವ ನಿಯಮಗಳನ್ನು ತರಲು ಹೊರಟಿರುವುದು ಸಂಪೂರ್ಣ ಮಾನವ ವಿರೋಧಿಯಾದ ಫ್ಯಾಸಿಸ್ಟ್ ರೀತಿಯ ನಡಳಿಕೆಯಂತೆ ಕಾಣುತ್ತದೆ.
ಗಂಡ ಕೊಲೆಗಾರನಾದರೆ ಪತ್ನಿಗೆ, ಕುಟುಂಬಕ್ಕೆ ಶಿಕ್ಷೆ ಕೊಡಲಾಗುತ್ತದೆಯೇ ? ನೀವು ತರಲು ಹೊರಟಿರುವ ಕಾನೂನು, ಸರಕಾರಿ ನೌಕರ ಸರಕಾರದ ಗುಲಾಮ-ಸರಕಾರಿ ನೌಕರರ ಪತ್ನಿ ಮತ್ತು ಮಕ್ಕಳು ಹಾಗೂ ಅವಲಂಬಿತರು ನೌಕರನ ಗುಲಾಮರು ಎಂದು ನಿರೂಪಿಸಿದಂತಾಗುತ್ತದೆ. ಇದು ನನಗೆ ಹಾಸ್ಯಾಸ್ಪದವಾಗಿ ಕಾಣುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಈ ರೀತಿಯ ಧೂರ್ತ ಹಾಗೂ ಅಮಾನವೀಯ ನಿಯಮಗಳನ್ನು ತರಬಾರದು ಎಂದು ನಾನು ಆಗ್ರಹಿಸುತ್ತೇನೆ.

ಬಿದ್ದರೆ ತಜ್ಞರ ಸಮಿತಿಯೊಂದನ್ನು ನೇಮಿಸಿ ಬೇರೆ ಬೇರೆ ದೇಶಗಳಲ್ಲಿ ಯಾವ ಯಾವ ಕಾನೂನುಗಳನ್ನು ಅಳವಡಿಸಿಕೊಂಡಿದ್ದಾರೆಂದು ಅಧ್ಯಯನ ನಡೆಸಬೇಕು. ಬಳಿಕ ಅವುಗಳಲ್ಲಿ ಉತ್ತಮವಾದ ಕಾನೂನುಗಳನ್ನು ಅಳವಡಿಸಿಕೊಳ್ಳಲು ಕ್ರಮ ವಹಿಸಬೇಕು.
ಸರ್ಕಾರ ಈ ಕುರಿತು ಆತುರ ಪಡದೆ ಅಧಿವೇಶನದಲ್ಲಿ ವಿಸ್ತೃತವಾಗಿ ಚರ್ಚಿಸಿ ನಿಯಮಗಳನ್ನು ಅಂತಿಮಗೊಳಿಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ ಸಿದ್ದರಾಮಯ್ಯ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressSiddaramaiah
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram