ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ರಥಸಪ್ತಮಿ ಎಂದರೆ ತಕ್ಷಣ ನೆನಪಾಗುವುದು ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡುವುದು. ಬೆಳಗಿನ ಜಾವದಲ್ಲಿ ತಲೆ, ಭುಜಗಳು, ಎದೆ, ಮೊಣಕಾಲು, ಪಾದಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರಥ ಸಪ್ತಮಿಯ ದಿನದಂದು ನಡೆದುಕೊಂಡು ಬಂದಿರುವ ರೂಢಿ. ಎಕ್ಕದ ಎಲೆಗಳನ್ನು ಮೇಲೆ ಹೇಳಿರುವ ದೇಹದ ಭಾಗಗಳಿಗೆ ಇಟ್ಟುಕೊಂಡು ಸ್ನಾನ ಮಾಡಿದ ನಂತರ, ಸೂರ್ಯನ 108 ಹೆಸರುಗಳನ್ನು ಉಚ್ಛರಿಸಿ ಸೂರ್ಯ ನಮಸ್ಕಾರ ಮಾಡುವ ಪದ್ಧತಿಯೂ ಇದೆ. ಒಂದು ವೇಳೆ 108 ನಾಮಗಳನ್ನು ಹೇಳಿಕೊಳ್ಳಲು ಸಾಧ್ಯವಾಗದೇ ಇದ್ದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ ಎಂಬ ಸೂರ್ಯನ 12 ನಾಮಗಳನ್ನು ಜಪಿಸಿ ನಮಸ್ಕಾರ ಮಾಡಬಹುದಾಗಿದೆ.
ಸೂರ್ಯನ ಪಥ ಬದಲಾವಣೆಯಾಗುವುದರಿಂದ ಮಾಘಮಾಸದಿಂದ ಮುಂದಕ್ಕೆ ಚಳಿ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿಯೂ ರಥಸಪ್ತಮಿಯ ಆಚರಣೆಯನ್ನು ನೋಡಬಹುದಾಗಿದ್ದು, ರಥಸಪ್ತಮಿ ಎಂಬ ಹೆಸರು ಸೂರ್ಯನ ರಥಕ್ಕೂ ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಗೂ ಸಂಬಂಧಿಸಿದ್ದನ್ನು ಸೂಚಿಸುತ್ತದೆ. ಸೂರ್ಯನ ಸಾರಥಿಯಾದ ಅರುಣ ರಥವನ್ನು ಉತ್ತರದತ್ತ ಮುನ್ನಡೆಸೆ, ಈಶಾನ್ಯ ದಿಕ್ಕಿಗೆ ಚಲಿಸುತ್ತಾನೆ. ಸೂರ್ಯನ ರಥದ ಚಕ್ರಗಳು ಕಾಲವನ್ನು, ಏಳು ಕುದುರೆಗಳು ಏಳು ಬಣ್ಣಗಳ ಹಾಗೂ ಏಳು ವಾರಗಳ ಪ್ರತಿನಿಧಿಗಳಾಗಿವೆ.
ರಥ ಸಪ್ತಮಿ ಶ್ಲೋಕಾಃ
ಅರ್ಕಪತ್ರ ಸ್ನಾನ ಶ್ಲೋಕಾಃ |
ಸಪ್ತಸಪ್ತಿಪ್ರಿಯೇ ದೇವಿ ಸಪ್ತಲೋಕೈಕದೀಪಿಕೇ |
ಸಪ್ತಜನ್ಮಾರ್ಜಿತಂ ಪಾಪಂ ಹರ ಸಪ್ತಮಿ ಸತ್ವರಮ್ || ೧ ||
ಯನ್ಮಯಾತ್ರ ಕೃತಂ ಪಾಪಂ ಪೂರ್ವಂ ಸಪ್ತಸು ಜನ್ಮಸು |
ತತ್ಸರ್ವಂ ಶೋಕಮೋಹೌ ಚ ಮಾಕರೀ ಹಂತು ಸಪ್ತಮೀ || ೨ ||
ನಮಾಮಿ ಸಪ್ತಮೀಂ ದೇವೀಂ ಸರ್ವಪಾಪಪ್ರಣಾಶಿನೀಮ್ |
ಸಪ್ತಾರ್ಕಪತ್ರಸ್ನಾನೇನ ಮಮ ಪಾಪಂ ವ್ಯಾಪೋಹತು || ೩ ||
ಅರ್ಘ್ಯ ಶ್ಲೋಕಂ
ಸಪ್ತ ಸಪ್ತಿ ವಹಪ್ರೀತ ಸಪ್ತಲೋಕ ಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ || ೧ ||
—————
ಅನ್ಯ ಪಾಠಃ –
ಯದಾ ಜನ್ಮಕೃತಂ ಪಾಪಂ ಮಯಾ ಜನ್ಮಸು ಜನ್ಮಸು |
ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ || ೧
ಏತಜ್ಜನ್ಮ ಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಮ್ |
ಮನೋ ವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತೇ ಚ ಯೇ ಪುನಃ || ೨
ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಿಕೇ |
ಸಪ್ತವ್ಯಾಧಿ ಸಮಾಯುಕ್ತಂ ಹರ ಮಾಕರಿ ಸಪ್ತಮೀ || ೩
ಸಪ್ತ ಸಪ್ತ ಮಹಾಸಪ್ತ ಸಪ್ತ ದ್ವೀಪಾ ವಸುಂಧರಾ |
ಶ್ವೇತಾರ್ಕ ಪರ್ಣಮಾದಾಯ ಸಪ್ತಮೀ ರಥ ಸಪ್ತಮೀ || ೪
ಇನ್ನು ರಥಸಪ್ತಮಿಯ ದಿನದಂದು ಬಳಸುವ ಎಕ್ಕದ ಎಲೆಗಳ ಬಗ್ಗೆ ಹೇಳುವುದಾದರೆ ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಥ ಸಪ್ತಮಿಯಂದು ಮುಂಜಾನೆಯೇ ಎದ್ದು ಎಕ್ಕದ ಎಲೆಗಳನ್ನು ತಲೆ, ಭುಜ, ಕತ್ತು, ಎದೆ, ತೊಡೆ, ಪಾದಗಳ ಮೇಲೆ ಇಟ್ಟುಕೊಂಡು ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ರಥಸಪ್ತಮಿಯ ದಿನದಂದು ಎಕ್ಕದ ಎಲೆಗಳನ್ನು ಮೈಮೇಲೆ ಇಟ್ಟುಕೊಂಡು ಸ್ನಾನ ಮಾಡುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಲೇಖನ:
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧಾರ್ಮಿಕಚಿಂತಕರು,ಜೋತಿಷ್ಯರು ,ಸಲಹೆಗಾರರು,
ಸಂಶೋಧಕರು. ಹಾಗು ಬರಹಗಾರರು✍