ವಿಮಾನ ನಿಲ್ದಾಣಗಳಲ್ಲಿ ರೇಷ್ಮೆ ಮಳಿಗೆ : ನಾರಾಯಣ ಗೌಡ Narayana Gowda saaksha tv
ಶಿವಮೊಗ್ಗ : ರೇಷ್ಮೆಗೆ ಉತ್ತಮ ದರ ಸಿಗುತ್ತಿದೆ. ವಿಮಾನ ನಿಲ್ದಾಣಗಳಲ್ಲೂ ರೇಷ್ಮೆ ಉತ್ಪನ್ನ ಮಾರಾಟ ಮಳಿಗೆ ಮಾಡುತ್ತೇವೆ.
ರೈತರಿಗೆ ನಷ್ಟವಾಗದಂತೆ ತಡೆಯಲು ಹೈಟೆಕ್ ಮಾರುಕಟ್ಟೆ ಕೂಡ ಮಾಡುತ್ತಿದ್ದೇವೆ. ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯ ನೀಡುತ್ತೇವೆ ಎಂದು ರೇಷ್ಮೆ ಸಚಿವ ಡಾ.ನಾರಾಯಣಗೌಡ ಮಾಹಿತಿ ನೀಡಿದರು.
ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರ ಜೊತೆ ಸಚಿವರು ಸಂವಾದ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ, ರೇಷ್ಮೆ ಮಾರುಕಟ್ಟೆ ಉತ್ತೇಜನ ನೀಡಲು ರಾಜ್ಯದ ಎಲ್ಲ ವಿಮಾನ ನಿಲ್ದಾಣದಲ್ಲೂ ರೇಷ್ಮೆ ಮಳಿಗೆಗಳನ್ನು ತೆರೆಯಲಾಗುವುದು ಎಂದು ಮಾಹಿತಿ ನೀಡಿದರು.
ಅಲ್ಲದೆ ರೇಷ್ಮೆಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗುವಾಗ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂದ ಸಚಿವರು, ಮಾರುಕಟ್ಟೆಗೆ ತೆರಳುವ ರೈತರು ಪೊಲೀಸರು ಮತ್ತು ದಲ್ಲಾಳಿಗಳಿಂದ ಬೇಸತ್ತಿದ್ದಾರೆ. ಹೀಗಾಗಿ ರೈತರಿಗೆ ತೊಂದರೆ ಆಗದಂತೆ ವಿಶೇಷ ಗುರುತಿನ ಚೀಟಿ ನೀಡುವುದಾಗಿ ಹೇಳಿದರು.