ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ಸುಲಭ , ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ

Namratha Rao by Namratha Rao
July 17, 2021
in Cooking, Newsbeat, ಅಡುಗೆ
Fasting - food - sawan
Share on FacebookShare on TwitterShare on WhatsappShare on Telegram

ರೈಸ್ ಬಾತ್

ಅನ್ನ – 1 ಕಪ್
ಕಡಲೆಬೀಜ – 2 ಚಮಚ
ಗೋಡಂಬಿ – 6
ಸಾಸಿವೆ – 1 ಚಮಚ
ಜೀರಿಗೆ – 1 ಚಮಚ
ಕಡಲೆಬೇಳೆ -1 ಚಮಚ
ಕರಿಬೇವು – ಸ್ವಲ್ಪ
ಕೊತ್ತಂಬರಿಸೊಪ್ಪು – ಸ್ವಲ್ಪ
ಈರುಳ್ಳಿ-1
ಹಸಿಮೆಣಸು-2
ಕ್ಯಾರೆಟ್-1
ಬೀನ್ಸ್-3
ಕ್ಯಾಪ್ಸಿಕಂ -1
ನಿಂಬೆ ಹಣ್ಣಿನ ರಸ-2 ಚಮಚ
ಎಣ್ಣೆ
ರುಚಿಗೆ ತಕ್ಕಷ್ಟು ಉಪ್ಪು

ಮೊದಲಿಗೆ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿ‌ ಮಾಡಿ. ನಂತರ ಸಾಸಿವೆ ಸೇರಿಸಿ. ‌ಅದು ಸಿಡಿದ ಬಳಿಕ ಜೀರಿಗೆ, ಕಡಲೆಬೇಳೆ, ಕಡಲೆಬೀಜ, ಗೋಡಂಬಿ ಸೇರಿಸಿ 2 ನಿಮಿಷ ಹುರಿಯಿರಿ. ಈಗ ಅದಕ್ಕೆ ಚಿಕ್ಕದಾಗಿ ಕತ್ತರಿಸಿದ ಹಸಿಮೆಣಸು, ಈರುಳ್ಳಿ ಹಾಕಿ ಹುರಿಯಿರಿ. ಈರುಳ್ಳಿ ಕೆಂಪಗಾದ ಬಳಿಕ ಕ್ಯಾರೆಟ್, ಬೀನ್ಸ್, ಕ್ಯಾಪ್ಸಿಕಂ ಸೇರಿಸಿ ಚೆನ್ನಾಗಿ ಕೈಯಾಡಿಸಿ. ನಂತರ ಉಪ್ಪನ್ನು ಸೇರಿಸಿ ಮಿಶ್ರ ಮಾಡಿ. ಬಳಿಕ ಇದಕ್ಕೆ ಅನ್ನವನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಈಗ ನಿಂಬೆ ಹಣ್ಣಿನ ರಸವನ್ನು ಸೇರಿಸಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ. ಈಗ ರುಚಿಯಾದ ರೈಸ್ ಬಾತ್ ಸವಿಯಲು ಸಿದ್ಧವಾಗಿದೆ.

Related posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

July 10, 2026
ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 10, 2026

ಗೆಣಸಿನ ಚಿಪ್ಸ್

ಬೇಕಾಗುವ ಪದಾರ್ಥಗಳು
ಗೆಣಸು – 2
ರುಚಿಗೆ ತಕ್ಕಷ್ಟು ಉಪ್ಪು
ಮೆಣಸಿನ ಪುಡಿ – 2 ಚಮಚ
ಎಣ್ಣೆ

ಮಾಡುವ ವಿಧಾನ
ಮೊದಲಿಗೆ ಗೆಣಸನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ. ನಂತರ ಬೇಕಾದ ಆಕಾರಕ್ಕೆ ಕತ್ತರಿಸಿ. ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಗೆಣಸಿನ ಚೂರುಗಳನ್ನು ಎಣ್ಣೆಯಲ್ಲಿ ಕರಿದು ತೆಗೆಯಿರಿ. ನಂತರ ಹುರಿದ ಗೆಣಸಿನ ಚೂರುಗಳಿಗೆ ಬಿಸಿ ಇರುವಾಗಲೇ ಉಪ್ಪು, ಮೆಣಸಿನ ಪುಡಿ ಉದುರಿಸಿ ಮಿಶ್ರ ಮಾಡಿ. ಗರಿಗರಿಯಾದ ಗೆಣಸಿನ ಚಿಪ್ಸ್ ಸವಿಯಲು ಸಿದ್ಧವಾಗಿದೆ.

ಅಕ್ಕಿ ಲಡ್ಡು

ಬೇಕಾಗುವ ಸಾಮಗ್ರಿಗಳು

ಅಕ್ಕಿ -3/4 ಕೆಜಿ
ತುಪ್ಪ – 1/2 ಕೆಜಿ
ಸಕ್ಕರೆ -1/2 ಕೆಜಿ
ಏಲಕ್ಕಿ – 4

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ಮಧ್ಯಮ ಉರಿಯಲ್ಲಿ ಚೆನ್ನಾಗಿ ಹುರಿದುಕೊಳ್ಳಿ. ನಂತರ ಅದನ್ನು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ಪುಡಿ ಮಾಡಿ. ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟನ್ನು ಜರಡಿ ಹಿಡಿದು ಅದಕ್ಕೆ ಸಕ್ಕರೆ, ಏಲಕ್ಕಿ ಪುಡಿ ಮತ್ತು ಬಿಸಿ ಮಾಡಿದ ತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ. ನಂತರ ಉಂಡೆ ಕಟ್ಟಿ. ತುಪ್ಪ ಕಡಿಮೆಯಾದರೆ ಇನ್ನೂ ಸ್ವಲ್ಪ ತುಪ್ಪ ಹಾಕಿ ಉಂಡೆ ಕಟ್ಟಿ.. ಈಗ ಅಕ್ಕಿಯ‌ ಲಡ್ಡು ಸವಿಯಲು ಸಿದ್ಧ.

Saakshatv cooking recipe akki Laddu

ಬಾಳೆಕಾಯಿ ಮಸಾಲಾ ಪರೋಟ

ಬೇಕಾಗುವ ಸಾಮಗ್ರಿಗಳು

ಗೋಧಿ ಹಿಟ್ಟು – 1ಕಪ್
ಓಂ ಕಾಳು – ಚಿಟಿಕೆಯಷ್ಟು
ಜೀರಿಗೆ ಪುಡಿ – 1/4 ಚಮಚ
ಎಣ್ಣೆ – 1 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ದೊಡ್ಡ ಬಾಳೆಕಾಯಿ – 2
ಆಲೂಗಡ್ಡೆ – 2

ಚಿಲ್ಲಿ ಫ್ಲೇಕ್ಸ್ – 1 ಚಮಚ
ಮೆಣಸಿನ ಪುಡಿ – 1/2 ಚಮಚ
ಅರಿಶಿನ ಪುಡಿ – 1/4 ಚಮಚ
ಗರಂ ಮಸಾಲಾ ಹುಡಿ – 1 ಚಮಚ
ಜೀರಾ ಹುಡಿ – 1/2 ಚಮಚ
ಚಾಟ್ ಮಸಾಲ ಹುಡಿ – 1/2 ಚಮಚ
ಬ್ಲಾಕ್ ಸಾಲ್ಟ್/ ಉಪ್ಪು
ಹೆಚ್ಚಿದ ಕೊತ್ತಂಬರಿ ಸೊಪ್ಪು – ಸ್ವಲ್ಪ
ಪುದಿನ – ಸೊಪ್ಪು
ನಿಂಬೆರಸ – 1 ಚಮಚ
Saakshatv cooking recipe balekayi masala parota

ಮಾಡುವ ವಿಧಾನ

ಮೊದಲಿಗೆ ಗೋಧಿ ಹಿಟ್ಟು, ಓಂ ಕಾಳು, ಜೀರಿಗೆ ಹುಡಿ, ಉಪ್ಪು, ಎಣ್ಣೆ, ಅಗತ್ಯವಿರುವಷ್ಟು ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಅರ್ಧ ಗಂಟೆ ನೆನೆಯಲು ಬಿಡಿ.

ಬಾಳೆಕಾಯಿಯನ್ನು ಚಿಕ್ಕದಾಗಿ ಕತ್ತರಿಸಿ ಬೇಯಿಸಿಟ್ಟುಕೊಳ್ಳಿ. ಆಲೂಗಡ್ಡೆಯನ್ನು ಬೇಯಿಸಿಕೊಳ್ಳಿ. ಈಗ ಒಂದು ಪಾತ್ರೆಯಲ್ಲಿ ಬೆಂದ ಬಾಳೆಕಾಯಿ, ಆಲೂಗಡ್ಡೆ ಸೇರಿಸಿ ಚೆನ್ನಾಗಿ ಮ್ಯಾಶ್ ಮಾಡಿ. ಅದಕ್ಕೆ ಚಿಲ್ಲಿ ಫ್ಲೇಕ್ಸ್, ಚಿಲ್ಲಿ ಪೌಡರ್, ಹಳದಿ, ಗರಂ ಮಸಾಲಾ ಪೌಡರ್, ಜೀರಾ ಪೌಡರ್, ಚಾಟ್ ಮಸಾಲ ಹುಡಿ, ಬ್ಲಾಕ್ ಸಾಲ್ಟ್ ಉಪ್ಪು, ಹೆಚ್ಚಿದ ಕೊತ್ತಂಬರಿ ಸೊಪ್ಪು, ಪುದಿನ, ನಿಂಬೆರಸ ಸೇರಿಸಿ ಚೆನ್ನಾಗಿ ಕಲಸಿ.
ನಂತರ ಚಪಾತಿ ಹಿಟ್ಟಿನಲ್ಲಿ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ ಪೂರಿಯಂತೆ ಲಟ್ಟಿಸಿ. ಅದರೊಳಗೆ ಮಸಾಲೆಯನ್ನು ಇಟ್ಟು ಅದನ್ನು ಮಡಚಿ ಚಪಾತಿಯಂತೆ ಲಟ್ಟಿಸಿ. ಕಾದ ತವಾ ಮೇಲೆ ಎಣ್ಣೆ ಹಾಕಿ ಎರಡೂ ಬದಿಯನ್ನು ಚೆನ್ನಾಗಿ ಬೇಯಿಸಿ. ಈಗ
ರುಚಿಯಾದ ಬಾಳೆಕಾಯಿ ಮಸಾಲಾ ಪರೋಟ ಸವಿಯಲು ಸಿದ್ಧವಾಗಿದೆ.

 

ಮಸಾಲೆ ಪೋಡಿ ಇಡ್ಲಿ

ಬೇಕಾಗುವ ಸಾಮಗ್ರಿಗಳು

ಉಳಿದ ಇಡ್ಲಿಗಳು
ಕೆಂಪು ಮೆಣಸು -5
ಕಡ್ಲೆಬೇಳೆ – 1/4 ಕಪ್
ಉದ್ದಿನಬೇಳೆ -1/4 ಕಪ್
ಅಕ್ಕಿ -1 ಚಮಚ
ಎಳ್ಳು -1 ಚಮಚ
ರುಚಿಗೆ ‌ತಕ್ಕಷ್ಟು ಉಪ್ಪು
Saakshatv cooking recipe how to prepare masala podi idli

ಮಾಡುವ ವಿಧಾನ

ಒಂದು ಕಡಾಯಿ ತೆಗೆದುಕೊಳ್ಳಿ. ಅದರಲ್ಲಿ ಸ್ವಲ್ಪ ಎಣ್ಣೆ ಬಿಸಿ ಮಾಡಿ. ‌ನಂತರ ಕೆಂಪು ಮೆಣಸು, ಕಡ್ಲೆಬೇಳೆ, ಉದ್ದಿನಬೇಳೆ, ಅಕ್ಕಿ, ಎಳ್ಳು ಸೇರಿಸಿ ಚೆನ್ನಾಗಿ ಹುರಿಯಿರಿ. ‌ನಂತರ ಇದನ್ನು ತಣ್ಣಗಾಗಿಸಿ.
ಬಳಿಕ ಮಿಕ್ಸರ್ ಜಾರ್ ಗೆ ಇದನ್ನು ‌ಹಾಕಿ, ಸ್ವಲ್ಪ ಇಂಗು ಮತ್ತು ಉಪ್ಪನ್ನು ಸೇರಿಸಿ ಚೆನ್ನಾಗಿ ಹುಡಿ ಮಾಡಿ.

ನಂತರ ತವಾ ಬಿಸಿ ‌ಮಾಡಿ ಸ್ವಲ್ಪ ತುಪ್ಪ ‌ಸವರಿ.‌ ಇಡ್ಲಿಯ ಎರಡೂ ಬದಿಗಳನ್ನು ಅರ್ಧ ನಿಮಿಷ ಹುರಿಯಿರಿ.‌ ನಂತರ ರುಬ್ಬಿದ ಪುಡಿಯನ್ನು ಸೇರಿಸಿ. ಇಡ್ಲಿಗೆ ಮಸಾಲೆ ಹುಡಿಯನ್ನು‌ ಚೆನ್ನಾಗಿ ‌ಬೆರೆಸಿ. ಈಗ ಮಸಾಲೆ ಪೋಡಿ ಇಡ್ಲಿ ಸವಿಯಲು ಸಿದ್ಧವಾಗಿದೆ. ‌ಇದನ್ನು ಬಿಸಿಯಾಗಿ ಬೆಳಿಗ್ಗೆಯ ಬ್ರೇಕ್ ಫಾಸ್ಟ್ ಆಗಿ‌ ಅಥವಾ ಸಂಜೆಯ ಸ್ಯಾಕ್ಸ್ ಆಗಿ‌ ಸೇವಿಸಬಹುದು.

Tags: cookingFoodsimple and easy recipiessnacks
ShareTweetSendShare
Join us on:

Related Posts

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 10, 2026
0

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ದೊಡ್ಡ ನಾಯಕರ ಮಕ್ಕಳು ಯಾರು ಕೂಡ ಆರ್‌ಎಸ್‌ಎಸ್‌ನಲ್ಲಿ ಪೂರ್ಣಕಾಲಿಕ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಇನ್ನೆರಡು ದಿನ ಮಾತ್ರ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

by Shwetha
July 10, 2026
0

ಹವಾಮಾನ ಇಲಾಖೆಯ (IMD) ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರಿಯಲಿದ್ದು, ಬಳಿಕ ಮಳೆಯ ತೀವ್ರತೆ ಕಡಿಮೆಯಾಗುವ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆ ಶಿವಕುಮಾರ್ ಇತಿಹಾಸದಲ್ಲೇ ಅತ್ಯಂತ ಪುಕ್ಕಲು ಮತ್ತು ಅಸಮರ್ಥ ಮುಖ್ಯಮಂತ್ರಿ- ಡಿಕೆಶಿ ನಾಲಾಯಕ್ ಸರ್ಕಾರದಲ್ಲಿ ರೈತರಿಗಿಲ್ಲ ರಕ್ಷಣೆ: ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದೇಕೆ?

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಆಡಳಿತ ನಡೆಸಲು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram