ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..! Simple But Tasty

Namratha Rao by Namratha Rao
March 5, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..! Simple But Tasty

ಪೂರ್ಣ ರೆಸಿಪಿಯನ್ನು ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಆಲೂಗಡ್ಡೆ ಸಮೋಸ

ಆಲೂಗಡ್ಡೆ ಸಮೋಸ

ಮಾಡುವ ವಿಧಾನ

ಒಂದು ದೊಡ್ಡ ಪಾತ್ರೆಯಲ್ಲಿ ಮೈದಾ /ಗೋಧಿ ಹಿಟ್ಟನ್ನು ತೆಗೆದುಕೊಳ್ಳಿ. ಅದಕ್ಕೆ ಎರಡು ಚಮಚ ತುಪ್ಪ, ಓಂ ಕಾಳು, ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಕಲಸಿ, ಸ್ವಲ್ಪ ಸ್ವಲ್ಪವೇ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಬಳಿಕ ಹಿಟ್ಟಿಗೆ ಒಂದು ಚಮಚ ಎಣ್ಣೆ ಸವರಿ 15-20 ನಿಮಿಷ ಹಾಗೆ ಬಿಡಿ.
ನಂತರ ಆಲೂಗಡ್ಡೆ ಬೇಯಿಸಿ, ಸ್ಮಾಷ್ ಮಾಡಿಟ್ಟುಕೊಳ್ಳಿ.
ಈಗ ಒಂದು ಬಾಣಲೆಗೆ ಎರಡೂ ಚಮಚ ಎಣ್ಣೆ ಸೇರಿಸಿ ಬಿಸಿ ಮಾಡಿ. ಎಣ್ಣೆ ಕಾದ ಬಳಿಕ ಅದಕ್ಕೆ ಜೀರಿಗೆ, ಸಣ್ಣದಾಗಿ ಕತ್ತರಿಸಿದ ಹಸಿಮೆಣಸಿನ ಕಾಯಿ, ಚಿಕ್ಕದಾಗಿ ಕತ್ತರಿಸಿದ ಶುಂಠಿ, ಕತ್ತರಿಸಿದ ಈರುಳ್ಳಿ, ಬಟಾಣಿ, ಸ್ಮಾಷ್ ಮಾಡಿದ ಆಲೂಗಡ್ಡೆ ಸೇರಿಸಿ. ಒಂದು ನಿಮಿಷ ಹುರಿಯಿರಿ. ಬಳಿಕ ರುಚಿಗೆ ತಕ್ಕಷ್ಟು ಉಪ್ಪು, ಧನಿಯಾ ಪೌಡರ್, ಚಾಟ್ ಮಸಾಲ, ಗರಂ ಮಸಾಲ, ಮೆಣಸಿನ ಪುಡಿ, ಅರಿಶಿನ ಪುಡಿ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ, ಹುರಿಯಿರಿ.
ಬಾಣಲೆಯನ್ನು ಕೆಳಗಿಳಿಸಿ, ಅದಕ್ಕೆ ಕೊತ್ತಂಬರಿ ಸೊಪ್ಪು ಮತ್ತು ನಿಂಬೆ ರಸ ಸೇರಿಸಿ ಚೆನ್ನಾಗಿ ಬೆರೆಸಿ.
Saakshatv cooking recipes potato samosa

ನಂತರ ಹಿಟ್ಟನ್ನು ತೆಗೆದುಕೊಂಡು ಸಣ್ಣ ಸಣ್ಣ ಉಂಡೆಗಳನ್ನು ಮಾಡಿ. ತ್ರಿಕೋನ ಆಕಾರದಲ್ಲಿ ಲಟ್ಟಿಸಿ. ಈಗಾಗಲೇ ಮಾಡಿಟ್ಟುಕೊಂಡ ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ. ನಂತರ ಬೆರಳುಗಳ ಸಹಾಯದಿಂದ ಮುಚ್ಚಿ.
ಬಳಿಕ ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಕಾಯಿಸಿ. ಎಣ್ಣೆ ಕಾದ ನಂತರ ಸಮೋಸವನ್ನು ಎಣ್ಣೆಯಲ್ಲಿ ಬಿಡಿ. ಮಧ್ಯಮ ಉರಿಯಲ್ಲಿ ಎರಡೂ ಬದಿಯನ್ನು ಹೊಂಬಣ್ಣಕ್ಕೆ ಬರುವವರೆಗೆ ಕರಿದು ತೆಗೆಯಿರಿ. ‌ರುಚಿಯಾದ ಬಿಸಿ ಬಿಸಿ ಸಮೋಸ ಸವಿಯಲು ರೆಡಿ.

ಗೋಧಿಹಿಟ್ಟಿನ ಎಗ್ ಲೆಸ್ ಚಾಕೊಲೇಟ್ ಕೇಕ್
ಗೋಧಿಹಿಟ್ಟಿನ ಎಗ್ ಲೆಸ್ ಚಾಕೊಲೇಟ್ ಕೇಕ್

ಮಾಡುವ ವಿಧಾನ

ಮೊದಲು ಹಾಲಿಗೆ ವಿನೆಗರ್ ಸೇರಿಸಿ, ಚೆನ್ನಾಗಿ ಕಲಕಿ 10 ನಿಮಿಷ ಹಾಗೆ ಬಿಡಿ.‌ ನಂತರ ವಿನೆಗರ್ ಸೇರಿಸಿದ ಹಾಲನ್ನು ಒಂದು ಬೌಲ್ ಗೆ ಹಾಕಿ. ಎಣ್ಣೆ, ವೆನಿಲ್ಲಾ ಎಸೆನ್ಸ್, ಸಕ್ಕರೆ ಪುಡಿ ಸೇರಿಸಿ ಚೆನ್ನಾಗಿ ಬೀಟ್ ಮಾಡಿ.
ಈಗ ಇದಕ್ಕೆ ಸ್ವಲ್ಪ ಸ್ವಲ್ಪವೇ ಕೋಕೋ ಪೌಡರ್, ಹಾಲಿನ ಪುಡಿ , ಜರಡಿ ಹಿಡಿದ ಗೋಧಿ ಹುಡಿ, ಬೇಕಿಂಗ್ ಪೌಡರ್, ಬೇಕಿಂಗ್ ಸೋಡಾ ಹಾಕಿ ನಿಧಾನಕ್ಕೆ ಬೆರೆಸಿ. ನಂತರ ನಿಧಾನವಾಗಿ ಹಾಲನ್ನು ಸೇರಿಸುತ್ತಾ ಎಲ್ಲವನ್ನೂ ಒಂದೇ ದಿಕ್ಕಿನಲ್ಲಿ‌ ಗಂಟಿಲ್ಲದಂತೆ ಕಲಸಿ. ಮಿಶ್ರಣವು ಇಡ್ಲಿ ಹಿಟ್ಟಿನ ಹದಕ್ಕೆ ಬರುವಂತೆ ಕಲಸಿ. ಈಗ ಕೇಕ್ ಮಿಕ್ಸ್ ತಯಾರಾಗಿದೆ.

ಕಡಾಯಿಯ ಒಳಗೆ ರಿಂಗ್ ಇಟ್ಟು, ಮುಚ್ಚಳ ಮುಚ್ಚಿ ಮಧ್ಯಮ ಉರಿಯಲ್ಲಿಟ್ಟು ಫ್ರೀ-ಹೀಟ್ ಮಾಡಿ.

ನಂತರ ಕೇಕ್ ಮಾಡುವ ಪಾತ್ರೆ (cake pan) ಗೆ ತುಪ್ಪ ಸವರಿ, ಮೈದಾದಿಂದ ಡಸ್ಟಿಂಗ್ ಮಾಡಿ. ತಯಾರಾದ ಕೇಕ್ ಮಿಕ್ಸ್ ಅನ್ನು ಕೇಕ್ ಪ್ಯಾನ್ ಗೆ ಹಾಕಿ.

ಈಗ ಬಿಸಿಯಾದ ಕಡಾಯಿಯಲ್ಲಿರುವ ರಿಂಗ್ ಮೇಲೆ ಗ್ರೀಸ್ ಮಾಡಿದ ಪಾತ್ರೆಯನ್ನು ಇಡಿ. ಮುಚ್ಚಳ ಮುಚ್ಚಿ ಕಡಿಮೆಯಿಂದ ಮಧ್ಯಮ ಉರಿಯಲ್ಲಿ ಕೇಕ್ ಅನ್ನು 30-35 ನಿಮಿಷ ಬೇಯಿಸಿ.
ಈಗ ಗೋಧಿಹಿಟ್ಟಿನ ಎಗ್ ಲೆಸ್ ಚಾಕೊಲೇಟ್ ಕೇಕ್ ರೆಡಿಯಾಗಿದೆ. ಇದು ತಣ್ಣಗಾದ ಬಳಿಕ ತುರಿದ ಚಾಕೊಲೇಟ್ ಪುಡಿಯಿಂದ ಅಲಂಕರಿಸಿ.

ಗರಿಗರಿಯಾದ ಬೆಳ್ಳುಳ್ಳಿ ಮಂಡಕ್ಕಿ / ಹುರಿಯಕ್ಕಿ

ಗರಿಗರಿಯಾದ ಬೆಳ್ಳುಳ್ಳಿ ಮಂಡಕ್ಕಿ 

ಮಾಡುವ ವಿಧಾನ

ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಜೀರಿಗೆ ಸೇರಿಸಿ, ಬಳಿಕ ಜಜ್ಜಿದ ಬೆಳ್ಳುಳ್ಳಿ ಹಾಕಿ ಹುರಿಯಿರಿ. ಅದಕ್ಕೆ ಶೇಂಗಾ ಬೇರೆಸಿ 30 ಸೆಕೆಂಡ್ ಹುರಿಯಿರಿ. ನಂತರ ಹಸಿ ಮೆಣಸು, ಕೊಬ್ಬರಿ ಹಾಕಿ ಹುರಿಯಿರಿ. ಬಳಿಕ ಅದಕ್ಕೆ ‌ಹುರಿಗಡಲೆ ಕರಿಬೇವಿನ ಸೊಪ್ಪು ಸೇರಿಸಿ, ಹುರಿಯಿರಿ. ನಿಂಬೇರಸ ಹಿಂಡಿ. ಈಗ ಮೆಣಸಿನ ಪುಡಿ, ಅರಿಶಿಣ ಪುಡಿ, ಸಕ್ಕರೆ ಪುಡಿ, ಚಾಟ್ ಮಸಾಲಾ, ಉಪ್ಪು ಹಾಕಿ ತಿರುವಿ.

Saakshatv cooking recipes Garlic mandakki

ಈಗ ಅದಕ್ಕೆ ಮಂಡಕ್ಕಿ/ ಹುರಿಯಕ್ಕಿ ಸೇರಿಸಿ ತಿರುವಿ. 2 ನಿಮಿಷ ಚೆನ್ನಾಗಿ ಮಿಕ್ಸ್ ಮಾಡಿ. ‌ಈಗ ಗರಿಗರಿಯಾದ ಬೆಳ್ಳುಳ್ಳಿ ಮಂಡಕ್ಕಿ ಸವಿಯಲು ಸಿದ್ಧ.
ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

ದಿಢೀರ್(instant) ಅವರೆಕಾಯಿ ರವಾ ಪಡ್ಡು

ದಿಢೀರ್(instant) ಅವರೆಕಾಯಿ ರವಾ ಪಡ್ಡು

ಮಾಡುವ ವಿಧಾನ

ಒಂದು ಪಾತ್ರೆಯಲ್ಲಿ ರವಾ ತೆಗೆದುಕೊಂಡು ಅದಕ್ಕೆ ಮೊಸರು ಸೇರಿಸಿ ಚೆನ್ನಾಗಿ ‌ಮಿಕ್ಸ್ ಮಾಡಿ. ಅದಕ್ಕೆ ಅಗತ್ಯವಿರುವಷ್ಟು ನೀರು ಸೇರಿಸಿ, ಹಿಟ್ಟಿನ ಹದಕ್ಕೆ ಕಲಸಿ. 30 ನಿಮಿಷ ಹಾಗೆ ಬಿಡಿ.

ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ. ಸಾಸಿವೆ ಸೇರಿಸಿ, ಸಾಸಿವೆ ಸಿಡಿದ ಬಳಿಕ ಅದಕ್ಕೆ ಅರಿಶಿನ, ಸಣ್ಣಗೆ ಕತ್ತರಿಸಿದ ಹಸಿಮೆಣಸಿನಕಾಯಿ, ಕರಿಬೇವಿನ ಸೊಪ್ಪು ಸೇರಿಸಿ. ನಂತರ ಸಣ್ಣಗೆ ಹೆಚ್ಚಿಟ್ಟುಕೊಂಡ ಈರುಳ್ಳಿ ಸೇರಿಸಿ ಕೆಂಪಗಾಗುವವರೆಗೆ ಹುರಿಯಿರಿ. ಬಳಿಕ ಬೇಯಿಸಿದ ಅವರೆಕಾಯಿ ಸೇರಿಸಿ, ರುಚಿಗೆ ತಕ್ಕಷ್ಟು ಉಪ್ಪು ‌ಸೇರಿಸಿ. ಚೆನ್ನಾಗಿ ಮಿಕ್ಸ್ ಮಾಡಿ.
ಅದಕ್ಕೆ ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು, ತೆಂಗಿನಕಾಯಿ ತುರಿ ಸೇರಿಸಿ. ಎಲ್ಲವನ್ನೂ ಚೆನ್ನಾಗಿ ಬೆರೆಸಿ.

ಈಗ ರವಾ ಹಿಟ್ಟಿಗೆ ಈ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಬೇಕಾದಷ್ಟು ನೀರು ಸೇರಿಸಿ ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ. ಬೇಕಿದ್ದರೆ ಉಪ್ಪು ಸೇರಿಸಿ. ನಂತರ ಅಡಿಗೆ ಸೋಡಾ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ.

Saakshatv cooking recipes paddu

ಸ್ಟೌವ್ ಮೇಲೆ ಪಡ್ಡು ಮಾಡುವ ಪ್ಯಾನ್ ಇಟ್ಟು ಎಲ್ಲ ಅಚ್ಚುಗಳಿಗೆ ಎಣ್ಣೆ ಸವರಿ. ಎಣ್ಣೆ ಬಿಸಿಯಾಗುತ್ತಿದ್ದಂತೆ, ರೆಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಎಲ್ಲ ಅಚ್ಚುಗಳಿಗೆ ಹಾಕಿ ಎರಡು ಕಡೆ ಬೇಯಿಸಿ.
ಗೋಲ್ಡನ್ ಬಣ್ಣ ಬರುವವರೆಗೆ ಪ್ರತಿ ಬದಿಯಲ್ಲಿ ಒಂದು ನಿಮಿಷ ಪಡ್ಡುಗಳನ್ನು ಬೇಯಿಸಿ.
ಈಗ ಬಿಸಿ ಬಿಸಿ ಅವರೆಕಾಯಿ ರವಾ ಪಡ್ಡು ಸವಿಯಲು ಸಿದ್ಧ.

ನುಗ್ಗೆ ಸೊಪ್ಪಿನ ಅಕ್ಕಿ ರೊಟ್ಟಿ

ನುಗ್ಗೆ ಸೊಪ್ಪಿನ ಅಕ್ಕಿ ರೊಟ್ಟಿ

ಮಾಡುವ ವಿಧಾನ:
ಮಿಕ್ಸಿಯಲ್ಲಿ ಅನ್ನವನ್ನು ರುಬ್ಬಿ. ನಂತರ ಅದನ್ನು ಒಂದು ಪಾತ್ರೆಯಲ್ಲಿ ಹಾಕಿ.
ಅದಕ್ಕೆ ‌ ಅಕ್ಕಿ ಹಿಟ್ಟು, ಹೆಚ್ಚಿದ ನುಗ್ಗೆ ಸೊಪ್ಪು, ಹೆಚ್ಚಿದ ಈರುಳ್ಳಿ, ಹೆಚ್ಚಿದ ಹಸಿಮೆಣಸಿನಕಾಯಿ, ಹೆಚ್ಚಿದ ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು ಎಲ್ಲವನ್ನೂ ಸೇರಿಸಿ, ಚೆನ್ನಾಗಿ ನಾದಬೇಕು.
ಚೆನ್ನಾಗಿ ಮಿಕ್ಸ್ ಆದ ಬಳಿಕ ಅದರಿಂದ ಸಣ್ಣ ಉಂಡೆಗಳನ್ನು ‌ಮಾಡಿ.
ಬಳಿಕ ಬಾಳೆ ಎಲೆಗೆ ಎಣ್ಣೆ ಸವರಿ ರೊಟ್ಟಿ ತಟ್ಟಿ.
ಕಾವಲಿಯನ್ನು ಒಲೆಯ ಮೇಲಿಟ್ಟು ಬಿಸಿ ಮಾಡಿ. ನಂತರ ತಟ್ಟಿದ ರೊಟ್ಟಿಯನ್ನು ಕಾದ ಕಾವಲಿ ಮೇಲೆ ಹಾಕಿ ಎಣ್ಣೆ ಸವರುತ್ತಾ ಎರಡೂ ಬದಿಗಳನ್ನು ಚೆನ್ನಾಗಿ ಬೇಯಿಸಿ.
Saakshatv cooking recipes Moringa rotti
ಈಗ ರುಚಿಯಾದ ಬಿಸಿ ಬಿಸಿ ನುಗ್ಗೆ ಸೊಪ್ಪಿನ ಅಕ್ಕಿ ರೊಟ್ಟಿ ಸವಿಯಲು ರೆಡಿ.

ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

Tags: cookingFoodsimple recipies
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram