ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರಗಳು ಕಠಿಣ ಕ್ರಮಗಳನ್ನು ತೆಗೆದುಕೊಂಡಿವೆ. ಆ ಹಿನ್ನೆಲೆಯಲ್ಲಿ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಅಲ್ಲದೆ ಕೊರೊನಾ ಶಂಕಿತರನ್ನು ಕ್ವಾರೆಂಟೈನ್ ಮಾಡಲಾಗುತ್ತಿದೆ. ಇದೆ ಹೊತ್ತಿಗೆ ಸೋಂಕು ಲೆಕ್ಕಿಸದೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ವಿಚಾರವಾಗಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಫುಲ್ ಗರಂ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿದ ಅವರು, ಸರಿಯಾಗಿ ಲಾಕ್ ಡೌನ್ ನಿಯಮಗಳನ್ನು ಪಾಲಿಸಿದ್ದರೇ, ಇಷ್ಟೊತ್ತಿಗೆ ಎಲ್ಲವೂ ಸರಿಯಾಗುತ್ತಿತ್ತು. ಆದರೆ ಐಸೋಲೇಷನಿಂದ ಓಡಿ ಹೋಗುವುದು, ತಪಾಸಣೆಗೆ ಎಂದು ಬಂದವರ ಮೇಲೆ ಹಲ್ಲೆ ಮಾಡಿದ ಕಾರಣಕ್ಕೆ ಇವತ್ತು ಈ ರೀತಿ ಸನ್ನಿವೇಶ ಎದುರಾಗಿದೆ. ಇದು ಒಬ್ಬರ ಪ್ರಶ್ನೆಯಲ್ಲ, ಎಲ್ಲರ ಆರೋಗ್ಯದ ಪ್ರಶ್ನೆ ಆಗಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








