ಕನ್ನಡದ ಹಿರಿಯ ನಿರ್ದೇಶಕ ಭಗವಾನ್ ಅವರ ಆಸ್ಪತ್ರೆಗೆ ದಾಖಲು…
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದಾರೆ.
89 ವರ್ಷದ ಹಿರಿಯ ನಿರ್ದೇಶಕರಾದ ಭಗವಾನ್ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, 2 ದಿನಗಳ ಹಿಂದೆ ಆಸ್ಪತ್ರೆಗೆ ಸೇರಿಸಲಾಗಿದೆ. ಡಾ ಮಂಜುನಾಥ್ ಅವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಭಗವಾನ್ ಅವರು ನಟ ನಿರ್ದೇಶಕ ಮತ್ತು ನಿರ್ಮಾಪಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
1966 ರಲ್ಲಿ ತೆರೆಕಂಡ ‘ಸಂಧ್ಯಾರಾಗ’ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗುವ ಮೂಲಕ ಗುರುತಿಸಿಕೊಂಡ ಇವರು ಡಾ ರಾಜ್ ಕುಮಾರ್ ಅವರ ಬಹುಪಾಲು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಒಟ್ಟು 65 ಕ್ಕೂ ಹೆಚ್ಚು ಚಿತ್ರಗಳನ್ನ ನಿರ್ದೇಶಿಸಿದ್ದಾರೆ.
SK Bhagavan : Veteran Kannada director Bhagavan hospitalized…