ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆರ್‍ಎಸ್‍ಎಸ್ ಸಭೆಯಲ್ಲಿ ಎಸ್.ಎಂ ಕೃಷ್ಣ: RSS ಟೋಪಿ ಧರಿಸಿ ಹಿಂದುತ್ವದ ಭಾಷಣ..!

Kariyappa N by Kariyappa N
October 25, 2020
in Newsbeat, Politics, Samagra karnataka, ರಾಜ್ಯ
sm krisna
Share on FacebookShare on TwitterShare on WhatsappShare on Telegram

ಬೆಂಗಳೂರು: ಒಂದು ಕಾಲದಲ್ಲಿ ಕಾಂಗ್ರೆಸ್‍ನ ಕಟ್ಟಾಳು, ತಮ್ಮ ರಾಜಕೀಯ ಜೀವನದ ಕೊನೆಯ ದಿನಗಳವರೆಗೂ ಕಾಂಗ್ರೆಸ್ ತಮ್ಮ ಉಸಿರು ಎಂದು ಭಾವಿಸಿದ್ದವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ. ಕೆಳಹಂತದಿಂದ ತಮ್ಮ ರಾಜಕೀಯ ಜೀವನದಲ್ಲಿ ಅತ್ಯುನ್ನತ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಅಲಂಕರಿಸಿದ್ದ ಎಸ್.ಎಂ ಕೃಷ್ಣ ಅವರು, ಬದಲಾದ ರಾಯಕೀಯ ಪರಿಸ್ಥಿತಿಯಲ್ಲಿ ಕೆಲ ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

smk rss
ಬಿಜೆಪಿ ಸೇರಿದ್ದರೂ ಆರ್‍ಎಸ್‍ಎಸ್‍ನಿಂದ ದೂರವೇ ಇದ್ದ ಎಸ್.ಎಂ ಕೃಷ್ಣ, ನಾಡಹಬ್ಬ ದಸರಾ ಆಚರಣೆ ಅಂಗವಾಗಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಹಿಂದುತ್ವ ಮತ್ತು ದೇಶಭಕ್ತಿಯ(Hindutva speech) ಕುರಿತು ಸುದೀರ್ಘ ಉಪನ್ಯಾಸ ನೀಡಿದ್ದಾರೆ.
ಎಸ್.ಎಂ.ಕೃಷ್ಣ ಅವರು ಬಿಜೆಪಿ ಸೇರಿದ ನಂತರ ಮೊದಲ ಬಾರಿಗೆ ಆರ್.ಎಸ್.ಎಸ್ ಸಭೆಯಲ್ಲಿ ಭಾಗವಹಿಸಿ ಆರ್‍ಎಸ್‍ಎಸ್ ಟೋಪಿ ಧರಿಸಿ ಹಿಂದುತ್ವದ ಬಗ್ಗೆ ಉಪನ್ಯಾಸ ನೀಡಿದ್ದಾರೆ.

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026

ರಾಷ್ಟ್ರಭಕ್ತಿಯ ಲಸಿಕೆ ಕೊಡಬೇಕು..
ಜಾಗತಿಕ ಮಟ್ಟದಲ್ಲಿ ಭಾರತದತ್ತ ತಿರುಗಿನೋಡುವಂತಹ ಮಟ್ಟಕ್ಕೆ ನಾವು ಬೆಳೆದಿದ್ದೇವೆ. ಸ್ವಾಮಿ ವಿವೇಕಾನಂದರು ಅಮೆರಿಕದಲ್ಲಿ ಮಾಡಿದ ಭಾಷಣ ಭಾರತದಲ್ಲಿ ರಾಷ್ಟ್ರೀಯತೆ ಹಾಗೂ ದೇಶಭಕ್ತಿ ಜಾಗೃತರಾಗುವಂತೆ ಮಾಡಿತ್ತು. ವಿವೇಕಾನಂದರ ಈ ಸಾಧನೆಯ ಹಿಂದೆ ಇದ್ದದ್ದೇ ಆರ್‍ಎಸ್‍ಆರ್ ಸಂಘಟನೆ ಎಂದು ಬಣ್ಣಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ, ದೇಶದಲ್ಲಿರುವ 134 ಕೋಟಿ ಜನರಿಗೆ ದೇಶಭಕ್ತಿ ಹಾಗೂ ರಾಷ್ಟ್ರಭಕ್ತಿಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದಿದ್ದಾರೆ.

smk rss2
ಎಂಜಿನಿಯರ್ ಆಗಿದ್ದವರೊಬ್ಬರು ತಮ್ಮ ಜೀವನವನ್ನೇ ಎಸ್‍ಎಸ್‍ಎಸ್‍ಗೆ ಮುಡಿಪಾಗಿಟ್ಟಿದ್ದಾರೆಂಬ ವಿಷಯ ತಿಳಿಯಿತು. ಇದನ್ನು ನೋಡಿದರೆ ನಾವು ಪುಟ್ಟಮಕ್ಕಳಿಗೆ ಬಾಲ್ಯದ ಹಂತದಲ್ಲಿಯೇ ರಾಷ್ಟ್ರಭಕ್ತಿಯ ಲಸಿಕೆ ಕೊಡುವ ಅಗತ್ಯವಿದೆ. ಇದರಿಂದ ಇಂದಿನ ಪೀಳಿಗೆಗೆ ರಾಷ್ಟ್ರಭಕ್ತಿಯ ಅರಿವು ಬರಲಿದೆ ಎಂದು ಎಸ್.ಎಂ ಕೃಷ್ಣ ಪ್ರತಿಪಾದಿಸಿದ್ದಾರೆ.

ಅಧಿಕಾರದ ಎಲ್ಲಾ ಮೆಟ್ಟಿಲು ಹತ್ತಿಸಿದ್ದು ಕಾಂಗ್ರೆಸ್..
ಎಸ್.ಎಂ ಕೃಷ್ಣ ಅವರಿಗೆ ತಮ್ಮ ರಾಜಕೀಯ ಜೀವನದಲ್ಲಿ ಅತ್ಯುನ್ನತ ಹುದ್ದೆಗಳನ್ನು ನೀಡಿದ್ದು ಕಾಂಗ್ರೆಸ್ ಪಕ್ಷ. ಶಾಸಕನಾಗಿ, ಸಂಸದನಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಲೋಕಸಭೆ ಉಪಸಭಾಪತಿಯಾಗಿ, ಮುಖ್ಯಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ..ಹೀಗೆ ಉನ್ನತ ಹುದ್ದೆಗಳನ್ನು ಕಾಂಗ್ರೆಸ್‍ನಲ್ಲಿದ್ದುಕೊಂಡೇ ಏರಿದವರು ಎಸ್.ಎಂ ಕೃಷ್ಣ.
ಇಂದಿರಾಗಾಂಧಿ ಕಾಲದಿಂದ ಸೋನಿಯಾಗಾಂಧಿವರೆಗೆ ಎಸ್.ಎಂ ಕೃಷ್ಣ ಗಾಂಧಿ ಕುಟುಂಬದ ಜತೆ ನಿಕಟ ಹೊಂದಿದ್ದವರು. ಹೀಗಾಗಿ ಕಾಂಗ್ರೆಸ್ ಇಲ್ಲದ ಎಸ್.ಎಂ ಕೃಷ್ಣ ಅವರನ್ನು ನೆನೆಸಿಕೊಳ್ಳಲು ಸಾಧ್ಯವಿಲ್ಲ ಎನ್ನುವಷ್ಟರ ಮಟ್ಟಿಗೆ ಕಾಂಗ್ರೆಸ್ ಪಕ್ಷಕ್ಕೆ ತಮ್ಮನ್ನು ಮುಡಿಪಾಗಿಸಿಕೊಂಡಿದ್ದರು.
ಆದರೆ, 2014ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‍ನಿಂದ ದೂರವೇ ಉಳಿದಿದ್ದ ಎಸ್.ಎಂ ಕೃಷ್ಣ, ತಮ್ಮ ರಾಜಕೀಯ ಜೀವನದುದ್ದಕ್ಕೂ ವಿರೋಧಿಸಿಕೊಂಡು ಬಂದಿದ್ದ ಬಿಜೆಪಿ ಪಕ್ಷವನ್ನು ಸೇರುವ ಮೂಲಕ ರಾಜಕೀಯ ಪಂಡಿತರ ಲೆಕ್ಕಾಚಾರವನ್ನೇ ತಲೆಕೆಳಗಾಗುವಂತೆ ಮಾಡಿದ್ದರು. ಬಿಜೆಪಿ ಸೇರಿದ್ದರೂ, ಅದರ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂಸೇವಕ ಸಂಘಟನೆಯಿಂದ ದೂರವೇ ಇದ್ದ ಕೃಷ್ಣ ಅವರು, ಆರ್‍ಎಸ್‍ಎಸ್ ಸಭೆಯಲ್ಲಿ ಹಿಂದುತ್ವದ ಭಾಷಣ ಮಾಡಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #SM Krishnahindutva speechRSS capRSS meeting
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram