‘ತಾಕತ್ತಿದ್ರೆ ಗುಜರಾತ್ ನಿಂದ ಗೆದ್ದು ತೋರಿಸಿ – ಆಮೇಲೆ ಚಹಾದ ಮಾಲೀಕರ ಬಗ್ಗೆ ಮಾತನಾಡಿ’ – ಸ್ಮೃತಿ ಇರಾನಿ..!
ಗುಜರಾತ್: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚಹಾ ಕಾರ್ಮಿಕರ ದಿನಗೂಲಿಯನ್ನು ಹೆಚ್ಚಿಸುತ್ತೇನೆ. ಚಹಾ ತೋಟದ ಮಾಲೀಕರು ಆ ಹಣವನ್ನು ನೀಡುವಂತೆ ಮಾಡುತ್ತೇನೆ ಎಂದು ಹೇಳಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರೀ ಸವಾಲೊಂದನ್ನ ಎಸೆದಿದ್ದಾರೆ. ಹೌದು ಗುಜರಾತ್ ನ ನವಸಾರಿ ಜಿಲ್ಲೆಯ ವನ್ಸದಾ ನಗರದಲ್ಲಿ ಪ್ರಚಾರ ಮೆರವಣಿಗೆ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಈ ಹಿಂದೆ ಕಾಂಗ್ರೆಸ್ ನವರಿಗೆ ಟೀ ಮಾರುವವರ ಬಗ್ಗೆ (ನರೇಂದ್ರ ಮೋದಿ) ಆಕ್ಷೇಪವಿತ್ತು. ಇದೀಗ ಚಹಾ ಕುಡಿಯುವವರ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.
ನಿಮಗೆ ತಾಕತ್ತಿದ್ದರೆ ಗುಜರಾತ್ನಿಂದ ಸ್ಪರ್ಧೆ ಮಾಡಿ. ಆಗ ನಿಮ್ಮ ಎಲ್ಲಾ ತಪ್ಪು ತಿಳಿವಳಿಕೆಗಳೂ ಕೊನೆಯಾಗುತ್ತವೆ ಎಂದು ಸ್ಮೃತಿ ಹೇಳಿದ್ದಾರೆ. ಗುಜರಾತ್ ಹಾಗೂ ಗುಜರಾತ್ ಜನರ ಮೇಲೆ ಕಾಂಗ್ರೆಸ್ ದ್ವೇಷ ಹಾಗೂ ಪೂರ್ವಗ್ರಹ ಪೀಡಿತವಾಗಿದೆ. ಇದೇನೂ ಹೊಸ ವಿಷಯವಲ್ಲ. ರಾಹುಲ್ ಗಾಂಧಿ ಹಾಗೂ ಅವರ ಪಕ್ಷ ಗುಜರಾತ್ ನಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆ ನಿರ್ಮಾಣಕ್ಕೂ ಆಕ್ಷೇಪ ವ್ಯಕ್ತಪಡಿಸಿದ್ದರಲ್ಲವೇ ಎಂದು ಪ್ರಶ್ನಿಸಿ ಟಾಂಗ್ ಕೊಟ್ಟಿದ್ದಾರೆ.
ಇತ್ತೀಚೆಗೆ ಅಸ್ಸಾಂನಲ್ಲಿ ಚುನಾವಣಾ ಮೆರವಣಿಗೆಯಲ್ಲಿ ಇತ್ತೀಚೆಗೆ ಭಾಗವಹಿಸಿದ್ದ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚಹಾ ಕಾರ್ಮಿಕರ ದಿನಗೂಲಿಯನ್ನು ಹೆಚ್ಚಿಸುತ್ತೇನೆ. ಚಹಾ ತೋಟದ ಮಾಲೀಕರು ಆ ಹಣವನ್ನು ನೀಡುವಂತೆ ಮಾಡುತ್ತೇನೆ ಎಂದು ಹೇಳಿ ಭಾರೀ ಟೀಕೆಗೆ ಗುರಿಯಾಗಿದ್ದರು. ಇದೀಗ ಸ್ಮೃತಿ ಇರಾನಿ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ.