ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡ ಹಗರಣದ ಆರೋಪ ಮಾಡಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ತಮ್ಮ ಹೋರಾಟ ನಿಲ್ಲಿಸಲು ಹಣಕಾಸಿನ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಸಿಎಂ ಪತ್ನಿ ಪಾರ್ವತಿ ಆಪ್ತ ಸಹಾಯಕನ ಹೆಸರಿನಲ್ಲಿ ತಮಗೆ ಆಮಿಷ ಒಡ್ಡಲಾಗಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆ ಒಳಪಡಿಸುವ ಅರ್ಜಿ ಹಿಂಪಡೆಯಬೇಕು ಎಂದು ಹಣದ ಆಮಿಷ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಪತ್ರಕರ್ತನೊಬ್ಬನ ಜೊತೆ ಬಂದು ವ್ಯವಹಾರ ಕುದುರಿಸಲು ಯತ್ನಿಸಿ ಇದಕ್ಕೆ ಸ್ನೇಹಮಯಿ ಕೃಷ್ಣ ಒಪ್ಪದ ಹಿನ್ನಲೆಯಲ್ಲಿ ಅವರ ಪತ್ನಿ ಹಾಗೂ ಮಗನ ಕಡೆಯಿಂದಲೂ ಒತ್ತಡ ಹಾಕಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.







