ಸಾಮಾಜಿಕ ಮಾಧ್ಯಮಗಳಿಗೆ ಹೊಸ ನಿಯಮಗಳ ಪಾಲನೆ ವರದಿ ಕೇಳಿದ ಕೇಂದ್ರ
ಭಾರತದಲ್ಲಿ ಸಾಮಾಜಿಕ ಜಾಲತಾಣಗಳ ಚಲನವಲನಗಳ ಮೇಲೆ ಹಿಡಿತ ಸಾಧಿಸುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವಿದೆ ಎಂದು ಕೆಲ ದಿನಗಳಿಂದ ಚರ್ಚೆಯಾಗ್ತಿತ್ತು. ಅಲ್ಲದೇ ಫೆಬ್ರವರಿಯಲ್ಲೇ ಸಾಮಾಜಿಕ ಜಾಲತಾಣಗಳ ಮೇಲೆ ಕಠಿಣ ನೀತಿಗಳನ್ನ ವಿಧಿಸಿ ಇದರ ಅನುಸರಣೆಗೆ ಕಂಪನಿಗಳಿಗೆ ಸರ್ಕಾರವು 3 ತಿಂಗಳ ಗಡುವು ನೀಡಿತ್ತು. ಆ ಗಡುವು ಈಗ ಮುಕ್ತಾಯವಾಗಿದ್ದು, ಹೊಸ ಡಿಜಿಟಲ್ ನಿಯಮಗಳ ಅನುಸರಣೆಯ ಸ್ಥಿತಿಯ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸೂಚಿಸಿದೆ.
ದೊಡ್ಡ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಈ ಮಾಹಿತಿ ಅತ್ಯಂತ ಅಗತ್ಯವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ತಿಳಿಸಿದೆ. ಹೊಸ ಸಾಮಾಜಿಕ ಮಾಧ್ಯಮ ನಿಯಮಗಳ ಪ್ರಕಾರ ಡಿಜಿಟಲ್ ಪ್ಲಾಟ್ಫಾರ್ಮ್ಗಳಿಂದ ನೇಮಕಗೊಂಡಿರುವ ಮುಖ್ಯ ನಿಯಮ ಪಾಲನೆ ಅಧಿಕಾರಿ, ಕುಂದುಕೊರತೆ ಅಧಿಕಾರಿ ಮತ್ತು ನೋಡಲ್ ಸಂಪರ್ಕ ವ್ಯಕ್ತಿಯ ವಿವರಗಳನ್ನು ಮತ್ತು ಸಂಪರ್ಕ ಮಾಹಿತಿಯನ್ನು ಸಚಿವಾಲಯ ಕೋರಿದೆ.
ಸಾಮಾಜಿಕ ಮಾಧ್ಯಮ ವ್ಯಾಪ್ತಿಯಲ್ಲಿ ಬರುವ ಅಪ್ಲಿಕೇಶನ್ನ ಹೆಸರು, ವೆಬ್ಸೈಟ್ ಮತ್ತು ಸೇವೆಯಂತಹ ವಿವರಗಳ ಹೊರತಾಗಿ, ಸಚಿವಾಲಯವು ಮೂವರು ಪ್ರಮುಖ ಸಿಬ್ಬಂದಿಯ ವಿವರಗಳನ್ನು ಮತ್ತು ಭಾರತದ ವೇದಿಕೆಯ ಭೌತಿಕ ಸಂಪರ್ಕ ವಿಳಾಸವನ್ನು ಕೋರಿದೆ. ಹೊಸ ನಿಯಮಗಳನ್ನು ಅನುಸರಿಸುವ ಸ್ಥಿತಿಗತಿಗಳ ಬಗ್ಗೆ ವರದಿ ಮಾಡಲು ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಕೇಳಿದೆ.
ನಿಮ್ಮನ್ನು ಎಸ್ಎಸ್ಎಂಐ ಎಂದು ಪರಿಗಣಿಸದಿದ್ದರೆ, ದಯವಿಟ್ಟು ನೀವು ಒದಗಿಸಿದ ಪ್ರತಿಯೊಂದು ಸೇವೆಗಳಲ್ಲಿ ನೋಂದಾಯಿತ ಬಳಕೆದಾರರ ಮಾಹಿತಿ ಒಳಗೊಂಡಂತೆ ಕಾರಣಗಳನ್ನು ಒದಗಿಸಿ. ಈ ನಿಯಮಗಳು ಮತ್ತು ಐಟಿ ಕಾಯ್ದೆ ಅನ್ವಯ ಯಾವುದೇ ಹೆಚ್ಚುವರಿ ಮಾಹಿತಿಯನ್ನು ಪಡೆಯುವ ಹಕ್ಕನ್ನು ಸರ್ಕಾರ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಗೂಗಲ್, ಫೇಸ್ಬುಕ್ ಮತ್ತು ಟ್ವಿಟರ್ ನಂತಹ ಡಿಜಿಟಲ್ ಪ್ಲಾಟ್ ಫಾರ್ಮ್ಗಳಿಗೆ ಜನರು ಹೆಚ್ಚಾಗಿ ಅವಲಂಬಿತರಾಗಿದ್ದಾರೆ. ಇವುಗಳಿಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಿದೆ.. ಅದ್ರಲ್ಲೂ ಫೇಸ್ ಬುಕ್ , ಇನ್ಸ್ಟಾಗ್ರಾಮ್ , ಟ್ವಿಟ್ಟರ್ ಗೆ ಹೆಚ್ಚು ಭಾರತದ ಬಳಕೆದಾರರಿದ್ದಾರೆ.. ಆದ್ರೆ ಇದೀಗ ಈ ಆಪ್ ಗಳನ್ನ ಭಾರತ ಸಂಪೂರ್ಣವಾಗಿ ಬ್ಲಾಕ್ ಮಾಡುತ್ತಾ ಎನ್ನೋ ಪ್ರಶ್ನೆಗಳು ಕಾಡತೊಡಗಿದೆ.. ಹೌದು.. ಫೆಬ್ರವರಿ 25 ರಂದು ಭಾರತ ಸರ್ಕಾರ ಘೋಷಣೆ ಮಾಡಿದಂತೆ ಫೇಸ್ ಬುಕ್ , ಇನ್ಸ್ಟಾಗ್ರಾಮ್ , ಟ್ವಿಟ್ಟರ್ ನಂತಹ ಸಾಮಾಜಿಕ ಜಾಲತಾಣಗಳ ಮೇಲೆ ಕಠಿಣ ನಿಯಮಗಳ ಹೇರಿಕೆ ಬಗ್ಗೆ ಘೋಷಣೆ ಮಾಡಿತ್ತು.
ಇಂತಹ ಸಾಮಾಜಿಕ ಜಾಲತಾಣಗಳ ಕಂಪನಿಗಳಿಗೆ ಯಾವುದೇ ಅಥಾರಿಟಿಗಳು ಪೋಸ್ಟ್ ಮಾಡಿದ ವಿಷಯಗಳನ್ನ 36 ಗಂಟೆಗಳ ಒಳಗೆ ತೆಗೆದುಹಾಕಬೇಕು ಮತ್ತು ದೇಶದಲ್ಲಿ ನೆಲೆಸಿರುವ ಅಧಿಕಾರಿಯೊಂದಿಗೆ ದೂರು ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂದು ಕೋರಿತ್ತು,.. ಅಲ್ಲದೇ ಇದನ್ನು ಅನುಸರಿಸಲು ಮೂರು ತಿಂಗಳ ಸಮಯವನ್ನು ಕಂಪನಿಗಳಿಗೆ ನೀಡಿತ್ತು..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.