ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲಿ ದಲಿತರಿಗೆ (Dalits) ಅನ್ಯ ಕೋಮಿನ ಕುಟುಂಬವನ್ನು ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ.
ಸಿಎಂ ಹುಟ್ಟೂರು ಸಿದ್ದರಾಮನ ಹುಂಡಿ ಗ್ರಾಮದಿಂದ ಕೂಗಳತೆ ದೂರದಲ್ಲಿನ ಶ್ರೀನಿವಾಸಪುರದಲ್ಲಿ (Srinivaspur) ಈ ಘಟನೆ ನಡೆದಿದೆ. ಅದೇ ಕೋಮಿನ ಜನರು ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.
ಶ್ರೀನಿವಾಸಪುರ ಗ್ರಾಮದಲ್ಲಿ ಮಾದಿಗ ಸಮುದಾಯದ ಜನ ಹೆಚ್ಚಾಗಿದ್ದಾರೆ. ಅದೇ ಗ್ರಾಮದ ಸುರೇಶ್ ಎಂಬುವವರ ಕುಟುಂಬಕ್ಕೆ ಕಳೆದ ನಾಲ್ಕು ವರ್ಷಗಳಿಂದ ಮಾದಿಗ ಸಮುದಾಯದ ಜನರು ಬಹಿಷ್ಕಾರ ಹಾಕಿದ್ದಾರೆ. ಗ್ರಾಮದಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಸುರೇಶ್ ಗೆ ಗ್ರಾಮದ ಹಿರಿಯರು 15 ಸಾವಿರ ರೂದ ದಂಡ ಹಾಕಿದ್ದರು. ಆದರೆ, ಸುರೇಶ್ ದಂಡ ಕಟ್ಟಿರಲಿಲ್ಲ. ಹೀಗಾಗಿ ಹಿರಿಯರು ಬಹಿಷ್ಕಾರ ಹಾಕಿದ್ದಾರೆ ಎ ನ್ನಲಾಗಿದೆ.
ಊರಿನ ದೇವಸ್ಥಾನಕ್ಕೆ ಈ ಕುಟುಂಬಕ್ಕೆ ಪ್ರವೇಶವಿಲ್ಲ. ಊರ ದೇವರ ಮೆರವಣಿಗೆ ವೇಳೆ ದೇವರ ಉತ್ಸವ ಇವರ ಮನೆ ಮುಂದೆ ನಿಲ್ಲುವಂತಿಲ್ಲ. ಗ್ರಾಮದಲ್ಲಿ ಯಾರೂ ಈ ಕುಟುಂಬದವರನ್ನು ಮಾತನಾಡಿಸುವಂತಿಲ್ಲ. ಕೂಲಿಗೆ ಕರೆಯುವಂತಿಲ್ಲ. ಮನೆಯಲ್ಲಿ ಯಾರಾದರೂ ಸತ್ತರೆ ಹೆಣ ಹೊರಲು ಯಾರೂ ಹೋಗುವಂತಿಲ್ಲ ಸೇರಿದಂತೆ ಹಲವು ವಿಷಯಗಳಲ್ಲಿ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.
ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು
ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...








