ಶೀರ್ಘದಲ್ಲೇ ಮಂಗಳೂರಿನಲ್ಲಿ ಸಾಫ್ಟ್ವೇರ್ ಪಾರ್ಕ್ – ಡಿಸಿಎಂ ಅಶ್ವತ್ಥನಾರಾಯಣ್
ಮಂಗಳೂರು, ಫೆಬ್ರವರಿ25: ಬೆಂಗಳೂರು ನಗರದಿಂದ ಹೊರಗೆ ಕೂಡ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಾಫ್ಟ್ವೇರ್ ಪಾರ್ಕ್ ಸ್ಥಾಪಿಸಲು ತಕ್ಷಣ ಕ್ರಮ ಕೈಗೊಳ್ಳುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.
ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಬುಧವಾರ ನಡೆದ ಇನ್ನೋವೇಶನ್ ಕಾನ್ ಕೇವ್ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದ ಐಟಿ ಬಿಟಿ , ವಿಜ್ಞಾನ -ತಂತ್ರಜ್ಞಾನ ಇಲಾಖೆಯ ಆವಿಷ್ಕಾರ ಹಬ್ ಪಟ್ಟಿಯಲ್ಲಿ ಮಂಗಳೂರು ಕೂಡ ಸೇರಿದೆ ಎಂದು ತಿಳಿಸಿದರು.
ನಗರದಲ್ಲಿರುವ ಉತ್ತಮ ಪರಿಸರ , ಪ್ರವಾಸೋದ್ಯಮಕ್ಕೆ ಇರುವ ಅವಕಾಶ ಹಾಗೂ ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಐಟಿ ಉದ್ಯಮದ ಜತೆಗೆ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಮತ್ತು ಅಭಿವೃದ್ಧಿ ನಿರ್ವಹಣೆ ಕ್ಷೇತ್ರದಲ್ಲೂ ಮಂಗಳೂರು ನಗರವನ್ನು ಪ್ರಮುಖ ಕ್ಲಸ್ಟರ್ ಆಗಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಂಗಳೂರು ಐಟಿ ಉದ್ಯಮಿಗಳ ನೆಲೆಯಾಗುವುದರ ಜತೆಗೆ ನವೋದ್ಯಮಗಳ ತಾಣವಾಗಿಯೂ ಹೊರಹೊಮ್ಮುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಶ್ವತ್ಥನಾರಾಯಣ್ ಹೇಳಿದರು.
ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು https://t.co/wr30jYeISz
— Saaksha TV (@SaakshaTv) February 21, 2021
ನೀವು ಹಣವನ್ನು ಬೇರೊಬ್ಬರ ಬ್ಯಾಂಕ್ ಖಾತೆಗೆ ತಪ್ಪಾಗಿ ಜಮಾ ಮಾಡಿದರೆ ಏನು ಮಾಡಬೇಕು? https://t.co/3p5y5BhQli
— Saaksha TV (@SaakshaTv) February 21, 2021
ಮಂಗಳೂರು ಅಕ್ಕಿ ಪುಂಡಿ https://t.co/KSNdn3uU5n
— Saaksha TV (@SaakshaTv) February 21, 2021