ಬಳ್ಳಾರಿ : ಬುಡಾ ಕಚೇರಿ ಆವರಣದಲ್ಲಿರುವ ಚರಂಡಿ ಕ್ಲೀನ್ ಮಾಡುವ ಮೂಲಕ ಶಾಸಕ ಸೋಮಶೇಖರ್ ರೆಡ್ಡಿ ಅವರು ಬಳ್ಳಾರಿಯಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಮ್ಮೂರು ಶೇಖರ್ ಹಾಗೂ ಜಿಲ್ಲಾ ಬಿಜೆಪಿ ಯುವ ಮತ್ತು ಮಹಿಳಾ ಮೋರ್ಚಾ ನೇತೃತ್ವದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ನಡೆಯಿತು.
ನಂತರ ಮಾಧ್ಯದವರ ಜೊತೆ ಮಾತನಾಡಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಮ್ಮೂರು ಶೇಖರ್ ಹಾಗೂ ಬಳ್ಳಾರಿ ಬಿಜೆಪಿಯ ಯುವ ಮತ್ತು ಮಹಿಳಾ ಮೋರ್ಚಾ ನೇತೃತ್ವದಲ್ಲಿ ಇಂದು ಸ್ವಚ್ಛ ಭಾರತ ಕಾರ್ಯಕ್ರಮ ಆರಂಭವಾಗಿದೆ. ಇನ್ಮುಂದೆ ಬೇರೆ ಬೇರೆ ಸ್ಥಳಗಳಲ್ಲಿ ನಿರಂತರವಾಗಿ ಸ್ವಚ್ಛತಾ ಕಾರ್ಯ ಮಾಡುತ್ತೇವೆ ಎಂದು ತಿಳಿಸಿದರು.
ಬುಡಾ ಆವರಣದಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಇಲ್ಲವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜೆಸಿಬಿಗಳನ್ನು ತರಸಿ ಸ್ವಚ್ಛತೆ ಮಾಡಿಸಿದ್ದೇವೆ. ಪೊಲೀಸ್ ಅಧಿಕಾರಿಗಳಿಗೆ ಹೇಳಿ ಈ ಸ್ಥಳದಲ್ಲಿ ಗಸ್ತು ತಿರುಗಲು ತಿಳಿಸುತ್ತೇವೆ ಎಂದು ಹೇಳಿದರು. ಹಾಗೇ ಪಾರ್ಕ್ ಅಭಿವೃದ್ಧಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವೆ ಎಂದು ಭರವಸೆ ನೀಡಿದರು.