ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದ್ದು, ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಪುಟ್ಟಣ್ಣ ಪರ ಅವರು ಮತಯಾಚಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿಕ್ಷಕರೊಂದಿಗೆ ಸೋಮಶೇಖರ್ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಪುಟ್ಟಣ್ಣಗೆ ಮತ ನೀಡುವಂತೆ ಪ್ರಚಾರ ಮಾಡಿದ್ದಾರೆ. ಸೋಮವಾರದಿಂದ ವಿಧಾನಸಭಾ ಅಧಿವೇಶನ ಆರಂಭವಾಗಿದ್ದು ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿ ಪುಟ್ಟಣ್ಣ ಪರ ಪತಯಾಚನೆ ಮಾಡಿದ್ದಕ್ಕೆ ಬಿಜೆಪಿ ನಾಯಕರು ಸಿಟ್ಟಾಗಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತಂತೆ ಕೂಡ ಸೋಮಶೇಖರ್ ಸಭೆ ಕರೆದಿದ್ದರು. ಆಗ ಡಿಕೆಶಿ ಅವರನ್ನು ಹೊಗಳಿದ್ದರು. ಈಗ ಮತ್ತೆ ಪ್ರಚಾರ ಮಾಡಿದ್ದಕ್ಕೆ ಪಕ್ಷಕ್ಕೆ ಮುಜುಗರ ಉಂಟಾಗಿದೆ.