Kalaburagi ಎಣ್ಣೆ ಕುಡಿಯೋಕೆ ಹಣ ಕೊಡದ ತಾಯಿಯನ್ನ ಕೊಂದ ಮಗ
ಕಲಬುರಗಿ : ಎಣ್ಣೆ ಕುಡಿಯೋಕೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ಕಲ್ಲೂರ ಕೆ ಗ್ರಾಮದಲ್ಲಿ ನಡೆದಿದೆ.
75 ವರ್ಷದ ಭೀಮಬಾಯಿ ಪೂಜಾರಿ ಕೊಲೆಯಾದ ತಾಯಿ. ಯಲ್ಲಪ್ಪ ಪೂಜಾರಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಇಂದು ಬೆಳಗ್ಗೆ ನಸುಕಿನ ಜಾವ ಆರೋಪಿ ತಾಯಿ ಬಳಿ ಕುಡಿತಕ್ಕಾಗಿ ಹಣಕ್ಕೆ ಪೀಡಿಸಲು ಪ್ರಾರಂಭಿಸಿದ್ದಾನೆ.
ಹಣ ಕೊಡದೇ ಇದ್ದಾಗ ಪಕ್ಕದಲ್ಲಿದ್ದ ಕಲ್ಲನ್ನು ತಾಯಿಯ ತಲೆ ಮೇಲೆ ಮೂರ್ನಾಲ್ಕು ಬಾರಿ ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಆರೋಪಿ ಯಲ್ಲಪ್ಪ ವಿಶೇಷಚೇತನವಾಗಿದ್ದು, ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನೆಲೋಗಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.