ಎಸ್. ಟಿ ಸೋಮಶೇಖರ್ ಪುತ್ರನಿಗೆ ಬ್ಯ್ಲಾಕ್ ಮೇಲ್: ಜ್ಯೋತಿಷ್ಯಿ ಪುತ್ರ ಅರೆಸ್ಟ್
ಬೆಂಗಳೂರು: ಸಚಿವ ಎಸ್ ಟಿ ಸೋಮಶೇಖರ್ ಪುತ್ರ ನಿಶಾಂತಗೆ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಜ್ಯೋತಿಷಿ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಖ್ಯಾತ ಜ್ಯೋತಿಷಿ ಚಂದ್ರಶೇಖರ ಸ್ವಾಮಿಯ ಪುತ್ರ ರಾಹುಲ್ ಭಟ್ ಬಂಧಿತ ಆರೋಪಿಯಾಗಿದ್ದಾನೆ. ಈತ ಅಶ್ಲೀಲ ವಿಡಿಯೋ ತಯಾರಿಸಿ ವಾಟ್ಸಾಪ್ ಮೂಲಕ ಪದೇ ಪದೇ ಸಂದೇಶ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ಹಿನ್ನಲೆ ಎಸ್ ಟಿ ಸೋಮಶೇಖರ್ ಪಿಎ ಸಿಸಿಬಿಯ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ತಿಂಗಳು 12ನೇ ತಾರೀಕಿನಂದು ರಾಹುಲ್ ಭಟ್ ಅಶ್ಲೀಲ್ ವಿಡಿಯೋವನ್ನು ಕಳುಹಿಸಿ ತಾವು ಕೇಳಿದಷ್ಟು ಹಣವನ್ನು ಕೊಡದಿದ್ದರೆ ಅಶ್ಲೀಲ ವಿಡಿಯೋ ಮತ್ತು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಿಗೆ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ಎಸ್ ಟಿ ಸೋಮಶೇಖರ್ ಪಿಎ ಸಿಸಿಬಿಯ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು ತನಿಖೆ ನಡೆಸಿದಾಗ ಪೊಲೀಸರು ಆರೋಪಿ ರಾಹುಲ್ ನನ್ನು ಬಂಧಿಸಿದ್ದಾರೆ. ಇನ್ನೂ ಆರೋಪಿ ರಾಹುಲ್ ಬೆಂಗಳೂರಿನ ಆರ್ಟಿ ನಗರ ನಿವಾಸಿ ಎಂದು ತಿಳಿದು ಬಂದಿದೆ.