ಸೋನಿಯಾ ಗಾಂಧಿ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು ಯಾವುದೇ ಪ್ರಭಾವ ಬೀರಲ್ಲ – ಸಿಎಂ ಬೊಮ್ಮಾಯಿ…
ಸೋನಿಯಾ ಗಾಂಧಿ ಅವರು ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ಕೆಲ ಕಾಲ ಭಾಗವಹಿಸಿದ್ದು ಯಾವುದೇ ರಾಜಕೀಯ ಪ್ರಭಾವವನ್ನು ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಯಾತ್ರೆಯಲ್ಲಿ ಭಾಗವಹಿಸುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯು ರಾಜ್ಯಾದ್ಯಂತ ಶೀಘ್ರದಲ್ಲೇ ಆರು ಜನಸಂಪರ್ಕ ಸಭೆಗಳನ್ನು ಆಯೋಜಿಸಲಿದೆ ಎಂದು ತಿಳಿಸಿದರು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಯಗೊಂಡಿರುವ ಆನೆ ಮತ್ತು ಅದರ ಮರಿಯ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಗಾಯಗೊಂಡ ಆನೆ ಮತ್ತು ಅದರ ಮರಿಗೆ ಸರ್ಕಾರ ಸೂಕ್ತ ಚಿಕಿತ್ಸೆ ನೀಡಲಿದೆ ಎಂದು ಹೇಳಿದರು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.
Sonia Gandhi taking part in Bharat Jodo Yatra for brief period to not have any political bearing, says Karnataka CM Basavaraj Bommai