‘ಬೆಂಗಳೂರಿಗರೇ ಭಯಪಡಬೇಡಿ, ನಿಮಗಾಗಿ ನಿಮ್ಮ ಸೋನು ಸೂದ್… ಇದ್ದೇನೆ’ – ರಿಯಲ್ ಹೀರೋ ಸೋನು ಸೂದ್
ಬೆಂಗಳೂರು : ಕಳೆದ ವರ್ಷ ಲಾಕ್ ಡೌನ್ ಆದಾಗಿನಿಂದಲೂ ಬಡವರು ಶ್ರೀಮಂತರು , ಯಾವುದೇ ರಾಜ್ಯದ ಜನರು ಕಷ್ಟದಲ್ಲಿದ್ದರೂ ಅಂತಹವರ ಸಹಾಯಕ್ಕಾಗಿ ಸದಾ ಸಿದ್ದವಿರುವ ಬಾಲಿವುಡ್ ನಟ ಸೋನು ಸೂದ್ ಈಗಾಗಲೇ ಬೆಂಗಳೂರಿಗರಿಗೂ ಸಹಾಯ ಮಾಡಿದ್ದಾರೆ.. ಇದೀಗ ಸೋನು ಸೂದ್ ಆಡಿರುವ ಮಾತು ಬೆಂಗಳೂರಿಗರ ಹೃದಯ ಗೆದ್ದಿದೆ.
ಹೌದು.. ದೇಶ ಹಾಗೂ ರಾಜ್ಯ ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಈ ನಡುವೆ ಕೊರೊನಾ ವೈರಸ್ ಎರಡನೇ ಅಲೆಗೆ ಸಿಲುಕಿರುವ ಬೆಂಗಳೂರಿಗೆ ಸೋನು ಸೂದ್ ಸಹಾಯಾಸ್ತ ಚಾಚಿದ್ದಾರೆ. ಕೊರೊನಾ ಹಾಟ್ಸ್ಪಾಟ್ ಎನಿಸಿಕೊಂಡಿರುವ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ ಹಾಗೂ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ ಭಾರಿ ಏರಿಕೆ ಕಂಡಿದೆ.
ಪ್ರಮುಖವಾಗಿ ಆಕ್ಸಿಜನ್ ಕೊರತೆ ಉಂಟಾಗಿ ಬೆಂಗಳೂರಿನಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಸೋನು ಸೂದ್ ಆಕ್ಸಿಜನ್ ನೆರವು ಘೋಷಿಸಿದ್ದಾರೆ. ಅಗತ್ಯವಿರುವವರು ಮಾತ್ರ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸೋನು ಸೂದ್ ‘ಬೆಂಗಳೂರಿಗರೇ ನೀವು ಉಸಿರಾಡಲು ನಾನು ಸಹಾಯ ಮಾಡುತ್ತೇನೆ, ತುರ್ತು ಸಮಸ್ಯೆಯಿದ್ದರೆ ಮಾತ್ರ ಸಂಪರ್ಕಿಸಿ’ ಎಂದು ವಾಟ್ಸಾಪ್ ನಂಬರ್ ಹಂಚಿಕೊಂಡಿದ್ದಾರೆ.
ಈಗಾಗಲೇ ಬೆಂಗಳೂರಿನ ಹಲವು ಕಡೆ ಸೋನು ಸೋದ್ ಫೌಂಡೇಶನ್ ಕಡೆಯಿಂದ ಆಕ್ಸಿಜನ್ ವ್ಯವಸ್ಥೆ, ಐಸಿಯು ಬೆಡ್ ವ್ಯವಸ್ಥೆ ಸೇರಿದಂತೆ ಹಲವರು ರೀತಿ ಸಹಾಯ ಮಾಡಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.