ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೌಂದರ್ಯ ನೆನಪು: ‘ಸೌಮ್ಯ’ ದುರಂತ ಸಾವಿಗೆ 16ವರ್ಷ!

admin by admin
April 17, 2020
in Cinema, International, Newsbeat, Samagra karnataka
Share on FacebookShare on TwitterShare on WhatsappShare on Telegram

ಬೆಂಗಳೂರು: ಸೌಂದರ್ಯ, ದಕ್ಷಿಣ ಭಾರತೀಯ ಚಿತ್ರರಂಗದ ಅದ್ಭುತ ಪ್ರತಿಭೆ. ಕನ್ನಡ ಸೇರಿದಂತೆ ದಕ್ಷಿಣ ಭಾರತೀಯ ಭಾಷೆಗಳ ಚಿತ್ರರಂಗದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ನಟಿ ಸೌಂದರ್ಯ ನಮ್ಮನ್ನಗಲಿ ಇಂದಿಗೆ ಹದಿನಾರು ವರ್ಷಗಳು. ಆದರೂ ಅವರು ಅಭಿನಯಿಸಿರುವ ಸಿನಿಮಾಗಳ ಮೂಲಕ ಇನ್ನೂ ಅಭಿಮಾನಿಗಳ ಮನದಲ್ಲಿ ಚಿರಪರಿಚಿತರಾಗಿದ್ದಾರೆ. ಚಿತ್ರನಟಿ, ನಿರ್ಮಾಪಕಿಯಾಗಿ ಸಾಧನೆಯ ಶಿಖರವೇರಿದ್ದ ನಟಿ ತಮ್ಮ ಸರಳತೆಗೆ ಹೆಸರಾಗಿದ್ದರು. ಇಂತಹ ಮೇರು ನಟಿ ವಿಮಾನ ದುರಂತದಲ್ಲಿ ಅಕಾಲ ಸಾವಿಗೀಡಾದದ್ದು ಮಾತ್ರ ಸಿನಿಮಾ ಅಭಿಮಾನಿಗಳಿಗೆ ಮರೆಯಲಾಗದ ನೋವನ್ನುಂಟು ಮಾಡಿತ್ತು.

ಜುಲೈ 18, 1972ಲ್ಲಿ ಹುಟ್ಟಿದ ಸೌಂದರ್ಯ ವೈದ್ಯೆಯಾಗಬೇಕೆಂದಿದ್ದವರು ಆಕಸ್ಮಿಕವಾಗಿ ಚಲನಚಿತ್ರರಂಗ ಪ್ರವೇಶಿಸಿದ್ದರು. ಈಕೆಯ ಮೂಲ ಹೆಸರು ‘ಸೌಮ್ಯ’, ತಮ್ಮ ಹಲವು ಚಿತ್ರಗಳಲ್ಲಿ ಇದೇ ಹೆಸರನ್ನು ಬಳಸಿಕೊಂಡಿದ್ದಾರೆ. ತೂಗುವೆ ಕೃಷ್ಣನ, ಸಿಪಾಯಿ, ನಾನು ನನ್ನ ಹೆಂಡ್ತೀರು, ಶ್ರೀ ಮಂಜುನಾಥ, ಆರ್ಯಭಟ, ದೋಣಿಸಾಗಲಿ, ಆಪ್ತಮಿತ್ರ ಸೇರಿ ಹಲವಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದ ಸೌಂದರ್ಯ ತೆಲುಗು, ತಮಿಳು, ಮಲಯಾಳಂಗಳಲ್ಲಿ ಸಹ ಬಹು ಬೇಡಿಕೆಯ ನಟಿಯಾಗಿದ್ದರು.

Related posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

February 22, 2026
ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

February 22, 2026

ನಟಿಯಾಗಿ ಅಪಾರ ಖ್ಯಾತಿ ಪಡೆದಿದ್ದ ಸೌಂದರ್ಯ, ಗಿರೀಶ್ ಕಾಸರವಳ್ಳಿಯವರ ‘ದ್ವೀಪ’ ಚಿತ್ರದ ಮೂಲಕ ನಿರ್ಮಾಪಕಿಯಾಗಿಗೂ ಗುರುತಿಸಿಕೊಂಡು. ಈ ಚಿತ್ರಕ್ಕೇ ಕೇಂದ್ರ ಸರ್ಕಾರದ ‘ಸ್ವರ್ಣಕಮಲ’ ಪ್ರಶಸ್ತಿ ಲಭಿಸಿತ್ತು. ಅದರ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ ಉತ್ತಮ ಚಿತ್ರ ಪ್ರಶಸ್ತಿ ಮತ್ತು ಉತ್ತಮ ನಟಿ ಪ್ರಶಸ್ತಿ ಕೂಡಾ ಸೌಂದರ್ಯ ಅವರಿಗೆ ಸಿಕ್ಕಿದೆ. ದೋಣಿ ಸಾಗಲಿ ಚಿತ್ರದಲ್ಲಿ ಸೌಂದರ್ಯ ಅವರ ಅದ್ಭುತ ನಟನೆಗೆ ರಾಜ್ಯ ಸರ್ಕಾರ ಶ್ರೇಷ್ಠ ನಟಿ ಪ್ರಶಸ್ತಿ ನೀಡಿತ್ತು. ಇನ್ನು ಸೌಂದರ್ಯ ಡಾ. ಎಸ್. ಎಲ್. ಭೈರಪ್ಪನವರ ಶ್ರೇಷ್ಠ ಕಾದಂಬರಿ ‘ಗೃಹಭಂಗ’ ವನ್ನು ಕಿರುತೆರೆಯಲ್ಲಿ ಧಾರಾವಾಹಿಯಾಗಿ ಮೂಡಿಸಿದ್ದರು.

ಎಂದೆಂದಿಗೂ ಮರೆಯಲಾಗದ್ದು ‘ನಾಗವಲ್ಲಿ’ ಪಾತ್ರ!

ಆಪ್ತಮಿತ್ರ ಚಿತ್ರದ ನಾಗವಲ್ಲಿ ಪಾತ್ರ ಯಾರು ತಾನೆ ಮರೆಯೋಕೆ ಸಾಧ್ಯ. ನಾಗವಲ್ಲಿಯಾಗಿ ಸೌಂದರ್ಯ ಅವರ ಅಭಿನಯಕ್ಕೆ ಸಿನಿ ರಸಿಕರು ಪಿಧಾ ಆಗಿಬಿಟ್ಟಿದ್ದರು. ಡಾ. ವಿಷ್ಣುವರ್ಧನ್ , ಸೌಂದರ್ಯ ಮತ್ತು ಅವಿನಾಶ್, ದ್ವಾರಕೀಶ್ ಮೊದಲಾದವರು ನಟಿಸಿದ್ದ ಈ ಚಿತ್ರದಲ್ಲಿ ಸೌಂದರ್ಯ ಅಭಿನಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. 16 ವರ್ಷದ ಸಿನಿ ಬದುಕಿನಲ್ಲಿ 102 ಚಿತ್ರಗಳಲ್ಲಿ ನಟಿಸಿದ್ದರು.

ಸಾಮಾಜಿಕ ಕಾಳಜಿ ಹೊಂದಿದ್ದ ಸೌಂದರ್ಯ ಅವರು ತಾವು ಹುಟ್ಟಿದ ಬಂಗಾರಪೇಟೆ ತಾಲೂಕಿನ ಗಂಜಿಗುಂಟೆ ಗ್ರಾಮದಲ್ಲಿ ಶಾಲೆಯನ್ನು ಕಟ್ಟಿಸಿಕೊಟ್ಟಿದ್ದರು. ಇಂದಿಗೂ ಆ ಶಾಲಾ ಕಟ್ಟಡದ ಮೇಲೆ ನಟಿ ಸೌಂದರ್ಯ ಹೆಸರು ಶಾಶ್ವತವಾಗಿ ಉಳಿದಿದೆ.

ಇನ್ನು 2004ರ ಏಪ್ರಿಲ್ 17ರಂದು ಬೆಂಗಳೂರಿನ ಜಕ್ಕೂರು ವಿಮಾನ ನೆಲೆಯಿಂದ ಆಂಧ್ರ ಪ್ರದೇಶಕ್ಕೆ ಚುನಾವಣಾ ಪ್ರಚಾರ ಸಲುವಾಗಿ ಹೊರಟಾಗ ವಿಮಾನ ಪತನವಾಗಿ ಸೌಂದರ್ಯ ಅವರು ಸಜೀವ ದಹನವದರು. ಈ ದುರಂತದ ವೇಳೆ ನಟಿ ಸೌಂದರ್ಯ ಹಾಗೂ ಅವರ ಅಣ್ಣ ಅಮರನಾಥ್ ಸಾವನ್ನಪ್ಪಿದ್ದರು.

Tags: Soundarya
ShareTweetSendShare
Join us on:

Related Posts

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

ಲಂಚ ಸ್ವೀಕರಿಸುವಾಗಲೇ ಸಿಕ್ಕಿಬಿದ್ದ BJP ಶಾಸಕ ಚಂದ್ರು ಲಮಾಣಿ; ಲೋಕಾಯುಕ್ತ ದಾಳಿ

by Shwetha
February 22, 2026
0

ಸಣ್ಣನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ....

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

ಸಿದ್ದು ಪರ ಬ್ಯಾಟಿಂಗ್, ಸೋಮಣ್ಣ ಜೊತೆ ಮೀಟಿಂಗ್: ದೆಹಲಿಯಲ್ಲಿ ರಾಜಣ್ಣ ಆಡುತ್ತಿರುವ ಆಟವೇನು?

by Shwetha
February 22, 2026
0

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಅಧಿಕಾರ ಹಂಚಿಕೆಯ ಕಿತ್ತಾಟ ತಾರಕಕ್ಕೇರಿರುವಾಗಲೇ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಒಂದು ‘ಬ್ರೇಕ್ ಫಾಸ್ಟ್ ಮೀಟಿಂಗ್’...

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

ಸುಪ್ರೀಂ ಕೋರ್ಟ್ ಏಟಿನ ಬೆನ್ನಲ್ಲೇ ಎಚ್ಚೆತ್ತ ಟ್ರಂಪ್ – ಅಮೆರಿಕದ ಟ್ಯಾರಿಫ್ ಕದನದಲ್ಲಿ ಭಾರತಕ್ಕೆ ಬೃಹತ್ ಜಯ;ಸುಂಕ ಶೇ.10ಕ್ಕೆ ಇಳಿಕೆ

by Shwetha
February 22, 2026
0

ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ವಹಿವಾಟಿನಲ್ಲಿ ಭಾರತಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

ಬಿಗ್ ಬಾಸ್ ಸಾಮ್ರಾಜ್ಯ ಗೆದ್ದರೂ ಸಿನಿಮಾ ಕೋಟೆಯಲ್ಲಿ ಸೋತ ಗಿಲ್ಲಿ; ಭರ್ಜರಿ ಹೈಪ್ ನಡುವೆಯೂ ನೆಲಕಚ್ಚಿದ ಚಿತ್ರಗಳು, ಮುಂದೇನು ಎನ್ನುವ ಚಿಂತೆಯಲ್ಲಿ ನಟ

by Shwetha
February 22, 2026
0

ರಿಯಾಲಿಟಿ ಶೋಗಳು ನೀಡುವ ಜನಪ್ರಿಯತೆ ಶಾಶ್ವತವಲ್ಲ, ಅದು ಕೇವಲ ನಾಲ್ಕು ದಿನದ ಹಬ್ಬ ಎನ್ನುವ ಮಾತು ಚಿತ್ರರಂಗದಲ್ಲಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆಯಾಗಿ ನಿಂತಿದ್ದಾರೆ...

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

ಕುರಿ ಕಾಯುವವನು ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು: ನನ್ನನ್ನು ಮುಗಿಸಲು ಸಂಚು ಎಂದ ಸಿದ್ದರಾಮಯ್ಯ

by Shwetha
February 22, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದೇ ಒಂದು ಟ್ವೀಟ್ ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ನಾಯಕತ್ವ ಬದಲಾವಣೆಯ ಚರ್ಚೆಗಳು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram