ರಾಜಕೀಯಕ್ಕೆ ಎಂಟ್ರಿಯಾಗುತ್ತಾರಾ ಬಿಸಿಸಿಐ ಬಿಗ್ ಬಾಸ್ ಗಂಗೂಲಿ..!
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷಗಳು ಮುಂಬರುವ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಆಡಳಿತರೂಢ ತೃಣ ಮೂಲ ಕಾಂಗ್ರೆಸ್ ನ ಅಧಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಈ ಬಾರಿಯ ಚುನಾವಣೆಯ ಪ್ರತಿಷ್ಠೆಯ ಕಣವಾಗಿದೆ. ಬಂಗಾಳದಲ್ಲಿ ತನ್ನ ಹಿಡಿತವನ್ನು ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿ ಕೂಡ ಮಾಸ್ಟರ್ ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ.
ಇನ್ನೊಂದೆಡೆ ಪಶ್ಚಿಮ ಬಂಗಾಳದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ಸಾಕಷ್ಟು ಕಸರತ್ತುಗಳನ್ನು ಮಾಡಿಕೊಳ್ಳುತ್ತಿದೆ. ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಈಗಾಗಲೇ ಆಪರೇಷನ್ ಕಮಲ ಮೂಲಕ ತೃಣ ಮೂಲ ಶಾಸಕರನ್ನು ತನ್ನತ್ತ ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿಕೊಳ್ಳುತ್ತಿದೆ.
ಏತನ್ಮಧ್ಯೆ ಮುಂದಿನ ಪಶ್ಚಿಮ ಬಂಗಾಳದ ಚುನಾವಣೆಯ ಅಖಾಡ ಕ್ಕೆ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಳಿಯುತ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ.
ಇದಕ್ಕೆ ಪೂರಕವಾಗಿ ಸೌರವ್ ಗಂಗೂಲಿ ಡಿಸೆಂಬರ್ 27ರಂದು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ಈ ಭೇಟಿಯಿಂದ ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ನಾನಾ ರೀತಿಯ ಮಾತುಗಳು ಸುದ್ದಿಗಳು ಕೇಳಿಬರುತ್ತಿವೆ.
ಆದ್ರೆ ಇದೊಂದು ಸೌಹಾರ್ದಯುತ ಭೇಟಿ. ಇದ್ರಲ್ಲಿ ರಾಜಕೀಯ ವಿಚಾರಗಳು ಏನು ಇಲ್ಲ . ಯಾವುದೇ ರಾಜಕೀಯ ಬೆಳವಣಿಗೆಳು ಸಹ ಇಲ್ಲ ಎಂಬ ಅಭಿಪ್ರಾಯಗಳು ಕೇಳಬರುತ್ತಿವೆ.
ಅಲ್ಲದೆ ಈ ಬಗ್ಗೆ ಸೌರವ್ ಗಂಗೂಲಿ ಕೂಡ ಏನನ್ನು ಹೇಳಿಲ್ಲ. ಸದ್ಯ ಮೌನಕ್ಕೆ ಶರಣಾಗಿದ್ದಾರೆ ಗಂಗೂಲಿ.
ಆದ್ರೆ ಸೌರವ್ ಗಂಗೂಲಿ ರಾಜಕೀಯಕ್ಕೆ ಧುಮುಕಿದ್ರೂ ಅಚ್ಚರಿ ಏನು ಇಲ್ಲ. ಈ ಹಿಂದೆ ಮಮತಾ ಬ್ಯಾನರ್ಜಿ ಜೊತೆಗೆ ಗಂಗೂಲಿ ಉತ್ತಮ ಬಾಂಧವ್ಯವನ್ನು ಹೊಂದಿದ್ದರು. ಆದ್ರೆ ನಂತರದ ದಿನಗಳಲ್ಲಿ ಇವರಿಬ್ಬರ ಸಂಬಂದ ಅಷ್ಟಕ್ಕಷ್ಟೇ ಇದೆ.
ಈ ನಡುವೆ, ಗಂಗೂಲಿ ಅಚ್ಚರಿಯ ರೀತಿಯಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಕಾರ್ಯದರ್ಶಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಗ ಜೈ ಶಾ ಅವರು ನೇಮಕಗೊಂಡಿದ್ದರು.
ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗೋಕೆ ಪರೋಕ್ಷವಾಗಿ ಅಮಿತ್ ಶಾ ಅವರ ಬೆಂಬಲವೂ ಇದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.
ಹೀಗಾಗಿ ಬಿಜೆಪಿಯ ಚಾಣಕ್ಯ ಅಮಿತ್ ಶಾ ದೂರದೃಷ್ಟಿಯನ್ನಿಟ್ಟುಕೊಂಡೇ ಗಂಗೂಲಿಯವರನ್ನು ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಳ್ಳುವಂತೆ ಮಾಡಿದ್ದಾರೆ. ಅದೇ ರೀತಿ ಪಶ್ಚಿಮ ಬಂಗಾಳದ ರಾಜಕೀಯ ಎಂಟ್ರಿಗೆ ಗಂಗೂಲಿಗೆ ಧುಮುಕುವಂತೆ ನೆರವು ನೀಡಿದ್ರೂ ಅಚ್ಚರಿ ಏನಿಲ್ಲ.
ಒಟ್ಟಿನಲ್ಲಿ ಈ ರಾಜಕೀಯದಾಟದಲ್ಲಿ ಏನನ್ನು ಹೇಳಲು ಸಾಧ್ಯವಿಲ್ಲ. ಅತ್ಯುತ್ತಮ ನಾಯಕತ್ವದ ಗುಣಗಳನ್ನು ಹೊಂದಿರುವ ದಾದಾ ಮುಂದಿನ ಪಶ್ಚಿಮ ಬಂಗಾಳದ ಚುನಾವಣೆಯ ಅಖಾಡಕ್ಕೆ ಇಳಿದ್ರೂ ಆಶ್ಚರ್ಯವೇನಿಲ್ಲ.