ನವದೆಹಲಿ : ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ‘ರೈತರಿಗಾಗಿ ಮಾತನಾಡಿ’ ಎಂಬ ಅಭಿಯಾನ ಆರಂಭಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರನ್ನು ಶೋಷಿಸುತ್ತಿದ್ದು, ಅದರ ವಿರುದ್ಧ ಜನರು ಧ್ವನಿಯೆತ್ತಬೇಕು ಎಂದು ಕರೆಕೊಟ್ಟಿದ್ದಾರೆ.
ಅಲ್ಲದೆ ಕೃಷಿ ಮಸೂದೆ ಹಿಂಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಗ್ರಹಿಸಿರುವ ವಿಡಿಯೊವನ್ನು ಟ್ಯಾಗ್ ಮಾಡಿದ್ದಾರೆ.
ಮನಮೋಹನ್ ಸಿಂಗ್ ಜನ್ಮದಿನ : ಶುಭ ಹಾರೈಸಿದ ಗಣ್ಯರು
ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದು, ರಾಷ್ಟ್ರಪತಿ ಅವರ ಅಂಕಿತವಷ್ಟೇ ಬಾಕಿಯಿದೆ.
ಈ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದಾರೆ.








