ರಾಯಚೂರು: ದಸರಾ ಹಿನ್ನೆಲೆಯಲ್ಲಿ ಇಂದು ಗುರು ರಾಯರ ಸನ್ನಿಧಾನದಲ್ಲಿ ವಿಶೇಷ ಪೂಜೆ ನೆರವೇರಿತು.
ರಾಘವೇಂದ್ರ ಸ್ವಾಮಿ (Raghavendra Swamy) ಮಠದಲ್ಲಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ವಿಶೇಷ ಪೂಜೆ ನಡೆಸಿಕೊಟ್ಟರು. ಅವರು, ನರಸಿಂಹ ದೇವರ ಸಾಲಿಗ್ರಾಮಕ್ಕೆ ಮನ್ಯುಸೂಕ್ತ ಪುನಹಚರಣೆ ನಡೆಸಿಕೊಟ್ಟರು. ನಂತರ ಉಂಜಾಳ ಮಂಟಪದಲ್ಲಿ ಶ್ರೀನಿವಾಸ ಕಲ್ಯಾಣ ಪ್ರವಚನ ಮಂಗಲ ಕಾರ್ಯಕ್ರಮ ನಡೆಯಿತು.
ನಂತರ ಭಕ್ತರ ಉಪಸ್ಥಿತಿಯಲ್ಲಿ ಹಳೆಪೇಟೆಯ ಶ್ರೀನಿವಾಸ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿಯ ವಸಂತೋತ್ಸವ ನೆರವೇರಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ರಾಯರ ದರ್ಶನ ಪಡೆದರು.