Benaka Amavasya | “ಬೆನಕನ ಅಮಾವಾಸ್ಯೆಯಂದು ದೇವರ ಮನೆ ಮತ್ತು ಪೂಜೆ” ಯ ಕುರಿತು ತಿಳಿದುಕೊಳ್ಳಬೇಕಾದ ವೈಶಿಷ್ಟ್ಯ ವಿಷಯಗಳು
೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ..
೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ಸ್ಪಷ್ಟತೆಯಿಲ್ಲದ, ಮಸುಕಾದ – ವಿಗ್ರಹಗಳು, ಫೋಟೋಗಳು, ಯಂತ್ರಗಳು ಇರಬಾರದು…
೩. ದೇವರ ಮನೆಯಲ್ಲಿ ಗುಡಿಸುವ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು…
೪. ದೇವರ ಮನೆಯನ್ನು ಅರಿಶಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ,
ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ…
೫. ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ “ನೈವೇದ್ಯ “ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು…
೬. ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು…
೭. ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ..
(ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು)
೮. ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಮಿಯ ಮರುದಿನ ದೇವರ ವಿಗ್ರಹಗಳನ್ನು “ಅರಿಶಿನದ ನೀರಿನಿಂದ ಶುದ್ಧ ಮಾಡಿ…
೯. ದೇವರ ಪೂಜೆಗೆ “ಆಂಜನೇಯ” ಸ್ವಾಮಿ ಇರುವ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆ ಬಾರಿಸಬೇಕು…
೧೦. ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವೆ , ದೇವರ ಹತ್ತಿರ ಮಧುಪರ್ಕ ಇರಿಸಿರಿ, ರಾತ್ರಿ ಮಲಗುವ ಮುಂಚೆ ಅದನ್ನು ಮನೆಯವರೆಲ್ಲಾ ಅಥವಾ ಹಿರಿಯರಾಗಲೀ ಭಕ್ತಿಯಿಂದ ಸೇವಿಸಿ…
೧೧. ದೇವರ ಪೂಜೆ ಮಾಡುವಾಗ ಮಾತುಗಳು, ಆಕಳಿಕೆ, ಕೋಪ, ಇವೆಲ್ಲದರಿಂದ ದೂರ ಇರಿ, ಅನಗತ್ಯ ಚಟುವಟಿಕೆಗಳು ಬೇಡ…
೧೨. ಸಂಧ್ಯಾವಂದನೆ ಮತ್ತು ಸ್ತ್ರೀಯರ ತುಳಸೀ ಪೂಜೆ ಇಲ್ಲದಿದ್ದರೆ ಯಾವ ಪೂಜೆಯೂ ಫಲ ಕೊಡುವುದಿಲ್ಲ…
೧೩. ದೇವರ ಪೂಜೆಯ ಸಮಯದಲ್ಲಿ ಪುರುಷರು ಮೇಲುಹೊದಿಕೆ ಅಂದರೆ ಶಲ್ಯವನ್ನು ಧರಿಸಿರಲೇಬೇಕು..
ಇಲ್ಲದಿದ್ದರೆ ಪೂಜಾ ಫಲ ರಾಕ್ಷಸರ ಪಾಲಾಗುವುದು..
ಬರೀ ಮೈಯಲ್ಲಿ ಕುಳಿತು ಪೂಜೆ ಮಾಡುವುದು, ಊಟ ಮಾಡುವುದು ಒಳಿತಲ್ಲ…
೧೪. ಹಣೆಯಲ್ಲಿ ಕುಂಕುಮ, ಗಂಧ, ಅಥವಾ ಭಸ್ಮ .ಇತ್ಯಾದಿ ಯಾವುದದಾರೂ ಧರಿಸದೇ ಪೂಜೆ ಮಾಡಬಾರದು..
ಧರಿಸಿಯೇ ಪೂಜೆ ಮಾಡಬೇಕು, ಇಲ್ಲದಿದ್ದರೆ ಪೂಜಾಫಲ ನಶಿಸುವುದು…
೧೫. ದೇವರ ಪೂಜೆಗೆ “ಹಸಿಯಾದ ಹಾಲ” ನ್ನು ಮಾತ್ರ ಬಳಸಿ…
೧೬. ದೇವರ ನೈವೇದ್ಯ ಮಾಡುವಾಗ ವೀಳ್ಯದೆಲೆ, ಅಡಿಕೆ ತಾಂಬೂಲ ಇಲ್ಲದ ನೈವೇದ್ಯ ಫಲ ಕೊಡುವುದಿಲ್ಲ..
ನೈವೇದ್ಯ ಮಾಡುವಾಗ “ತುಳಸೀಪತ್ರೆ”ಯನ್ನು ಬಳಸಬೇಕು…
೧೭. ದೇವರ ಪೂಜೆಗಳು ಸಂಕಲ್ಪ ಇಲ್ಲದೇ ಮಾಡಬೇಡಿ, ಸಂಕಲ್ಪ ಇದ್ದರೆ ನಿಮ್ಮ ಪ್ರಾರ್ಥನೆಗಳು ಬೇಗ ಈಡೇರುತ್ತವೆ..
೧೮. ದೇವರ ಮನೆಯಲ್ಲಿ ಚಿಕ್ಕದೀಪಗಳನ್ನು ಜೋಡಿಸಿ ಇಡಿ, ದೊಡ್ಡ ದೀಪಗಳಾಗಿದ್ದರೆ ಎಡಗಡೆ ಬಲಗಡೆ ಇಡಿ..

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯ
೧೯. ಗಣಪತಿ ಪೂಜೆ, ಮನೆದೇವರ ಪೂಜೆ, ದೇವಿ ಪೂಜೆಯಿಂದ ಮಾತ್ರ ಪೂರ್ಣ ಪೂಜಾಫಲ ದೊರೆಯವುದು..
ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು ಪೂಜಿಸಿದರೇ ಮನೆಗೆ ನಮಗೆ ರಕ್ಷಣೆ..
ಮನೆದೇವರ ಪೂಜೆ ಇಲ್ಲದಿದ್ದರೆ ಯಾವ ದೇವರಗಳೂ ನಿಮ್ಮ ಮನೆಯನ್ನು ರಕ್ಷಿಸುವುದಿಲ್ಲ, ಎಂಥಾ ಕಷ್ಟಬಂದರೂ ನಮ್ಮ ಮನೆಯನ್ನು ನಮ್ಮನ್ನು ರಕ್ಷಿಸುವುದು “ಮನೆದೇವರೇ..”!
೨೦. ಮನೆಯ ಹೊಸ್ತಿಲನ್ನು ಪೊರಕೆಯಿಂದ ಗುಡಿಸಬೇಡಿ, ಹೊಸ್ತಿಲಲ್ಲಿ “ಮಹಾಲಕ್ಷ್ಮೀ” ಸಾನಿಧ್ಯ ಇರುತ್ತದೆ..
೨೧. “ಶ್ರೀ ಚಕ್ರ” , ಬಲಮುರಿ ಶಂಖ, ಬಲಮುರಿ ಗಣೇಶ, ಸಾಲಿಗ್ರಾಮಗಳು, ಎರಡೂ ಪಾದದಲ್ಲಿ ಕಾಣಿಸುವ ಮಹಾಲಕ್ಷ್ಮೀ .. ಇತ್ಯಾದಿ ಈ ದೇವರುಗಳೆಲ್ಲಾ “ಅಷ್ಟೈಶ್ವರ್ಯಗಳನ್ನು ಪ್ರಧಾನಿಸುವ ದೇವರುಗಳು, ಈ ದೇವರುಗಳ ಪೂಜೆ ತುಂಬಾ ವಿಶೇಷವಾಗಿರುತ್ತದೆ.








