ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕೇವಲ ಭಾಷಣ ಸಾಲದು; ಕದನ ವಿರಾಮ ಕುರಿತು ಸ್ಪಷ್ಟ ಉತ್ತರ ನೀಡಿ – ಕೃಷ್ಣ ಬೈರೇಗೌಡರ ಒತ್ತಾಯ

Speeches Alone Aren’t Enough; Give a Clear Answer on Ceasefire

Shwetha by Shwetha
May 14, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡಿದ ಕರ್ನಾಟಕ ಸರ್ಕಾರ ಈಗ ಕೇಂದ್ರ ಸರ್ಕಾರದ ನಿರ್ಧಾರಗಳ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ. ರಾಜ್ಯದ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೇಲೆ ಸರಣಿ ಪ್ರಶ್ನೆಗಳ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೃಷ್ಣ ಬೈರೇಗೌಡ ಅವರು, ಪ್ರಧಾನಿ ಮೋದಿಯವರು ಏನೇನು ಭಾಷಣ ಮಾಡಿದರೂ ಸಾಕಾಗಲ್ಲ. ದೇಶದ ಭದ್ರತೆ, ಸೈನ್ಯದ ಸಾಹಸ ಮತ್ತು ಸಾರ್ವಜನಿಕ ಭಾವನೆಗಳ ಹಿನ್ನೆಲೆಯಲ್ಲಿ, ಕದನ ವಿರಾಮ ಘೋಷಣೆಯ ಹಿಂದೆ ಇರುವ ಉದ್ದೇಶವನ್ನು ಜನತೆಗೂ ತಿಳಿಯಬೇಕು ಎಂದು ಸ್ಪಷ್ಟವಾಗಿ ಹೇಳಿದರು.

Related posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

May 21, 2026
ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

May 21, 2026

ಪಾಕಿಸ್ತಾನಕ್ಕೆ ಪಾಠ ಕಲಿಸಲು ನಾವು ಆಪರೇಷನ್ ಸಿಂಧೂರಗೆ ಬೆಂಬಲ ನೀಡಿದ್ದೆವು. ಅದು ಸರಿಯಾದ ಹೆಜ್ಜೆ ಎಂಬ ನಂಬಿಕೆ ನಮಗೆ ಇತ್ತು. ಆದರೆ ಈಗ ಸರಕಾರ ಕದನ ವಿರಾಮವನ್ನು ಘೋಷಿಸಿದೆ. ಆಗ ಪ್ರಶ್ನೆ ಏನೆಂದರೆ – ನಾವು ಯಾವ ಗುರಿ ಇಟ್ಟುಕೊಂಡು ಆ ಕದನ ಪ್ರಾರಂಭಿಸಿದ್ದೆವು? ಆ ಗುರಿ ಈಡೇರಿದೆಯಾ? ನಿಜಕ್ಕೂ ಪಾಕಿಸ್ತಾನಕ್ಕೆ ಪಾಠವಾಗಿದೆ ಎಂದು ಭರವಸೆ ಇದೆವೇ? ಎಂದು ಅವರು ಪ್ರಶ್ನಿಸಿದರು.

ಈ ನಿರ್ಧಾರ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿಯೂ ಗೊಂದಲ ಮತ್ತು ಅನುಮಾನಗಳು ಹುಟ್ಟಿವೆ. ದೇಶದ ಭದ್ರತೆಗೆ ಸಂಬಂಧಪಟ್ಟ ಈ ವಿಷಯದಲ್ಲಿ, ರಾಜಕೀಯ ಭಾಷಣಗಳಿಗೆ ಮೀರಿ ಸ್ಪಷ್ಟವಾದ, ಸಮರ್ಥನೀಯ ಉತ್ತರ ನೀಡುವ ಹೊಣೆ ಪ್ರಧಾನಿಯವರದ್ದೆ ಎಂದು ಬೈರೇಗೌಡರು ತಿಳಿಸಿದರು.

ಈ ಸಂದರ್ಭದಲ್ಲಿಯೇ ಅವರು ಮತ್ತೊಂದು ಮಹತ್ವದ ವಿಚಾರ ಎತ್ತಿದರು – ಯುದ್ಧ ಅಥವಾ ಕದನ ವಿರಾಮವೆಂಬ ತೀರ್ಮಾನಗಳು ರಾಜಕೀಯ ಪ್ರದರ್ಶನಕ್ಕೆ ವಿಷಯವಾಗಬಾರದು. ಇದು ರಾಷ್ಟ್ರದ ಭದ್ರತೆಗೆ ಸಂಬಂಧಪಟ್ಟದ್ದು. ದೇಶದ ಜನರ ಭದ್ರತೆ ಮತ್ತು ಸೈನಿಕರ ಬಲಿದಾನಗಳ ಬಗ್ಗೆ ಕೇಂದ್ರ ಸರ್ಕಾರವು ಸ್ಪಷ್ಟ ಹಾಗೂ ಜವಾಬ್ದಾರಿಯುತ ನಿಲುವು ತೋರಬೇಕು, ಎಂದರು.

ಪಾಕ್‌ನ ನಿಲುವು ಏನು?

ಇತ್ತೀಚೆಗೆ ಪಾಕಿಸ್ತಾನದ ವಿರುದ್ಧದ ಹೋರಾಟದ ಬಗ್ಗೆಯೂ ಕೃಷ್ಣ ಬೈರೇಗೌಡ ಮಾತನಾಡಿದರು. ನಾವು ಹಲವಾರು ಬಾರಿ ಪಾಕಿಸ್ತಾನದಿಂದ ನಡೆದ ಉಗ್ರರ ದಾಳಿಗಳನ್ನು ನೋಡಿದ್ದೇವೆ. ಈ ಹಿನ್ನೆಲೆಯಲ್ಲಿ ಭಾರತ ಯುದ್ಧಕ್ಕೆ ಇಳಿದಾಗ, ಅದನ್ನು ಪುನಃ ಮಧ್ಯದಲ್ಲಿ ನಿಲ್ಲಿಸುವುದು ಅರ್ಥಹೀನವೆನಿಸುತ್ತದೆ. ಇದರಿಂದ ಉಗ್ರಶಕ್ತಿಗಳಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಮೋದಿ ಸರ್ಕಾರ ಸ್ಪಷ್ಟನೆ ನೀಡಬೇಕೆಂಬ ಒತ್ತಾಯ

ಈ ಎಲ್ಲದರಿಂದಾಗಿ, ಪ್ರಧಾನಿ ಮೋದಿ ಅವರೇ ಸ್ವತಃ ಈ ನಿರ್ಧಾರಗಳ ಹಿಂದಿರುವ ಕಾರಣಗಳನ್ನು ದೇಶದ ಜನತೆಗೆ ವಿವರವಾಗಿ ತಿಳಿಸಬೇಕು ಎಂದು ಸಚಿವ ಬೈರೇಗೌಡ ಒತ್ತಾಯಿಸಿದರು. ಜನರು ಕೇಳುತ್ತಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಗಬೇಕು. ದೇಶಭಕ್ತಿಯ ಮಾತುಗಳನ್ನು ಕೇವಲ ರ‍್ಯಾಲಿಗಳಲ್ಲಿ ನೀಡುವ ಬದಲು, ನೈಜ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡುವುದು ಮುಖ್ಯ ಎಂದು ಅವರು ಹೇಳಿದರು.

ShareTweetSendShare
Join us on:

Related Posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

by Shwetha
May 21, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ತಾಣಗಳಾಗಿ ಉಳಿದಿಲ್ಲ. ಅವು ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವ ಶಕ್ತಿಯುತ ಅಸ್ತ್ರಗಳಾಗಿ ಬದಲಾಗಿವೆ. ಇತ್ತೀಚೆಗೆ ಸುಪ್ರೀಂ ಕೋರ್ಟ್...

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

by Shwetha
May 21, 2026
0

ರಾಜ್ಯ ಬಿಜೆಪಿಯಲ್ಲಿ ಈಗ ಸದ್ದಿಲ್ಲದೆ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲು ಇನ್ನೂ...

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

by Shwetha
May 21, 2026
0

ಎಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿರುವ ಪ್ರಕರಣ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಯ...

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

by Shwetha
May 21, 2026
0

ಎಂಬಿ ಪಾಟೀಲ್ ಅವರು ರಾಜ್ಯದಲ್ಲಿ ಭಾರೀ ಮಟ್ಟದ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್ ಸಂಸ್ಥೆ ಕರ್ನಾಟಕದಲ್ಲಿ ಸುಮಾರು...

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

by Shwetha
May 21, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸವು ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸಂಬಂಧಗಳಿಗಿಂತ ಹೆಚ್ಚಾಗಿ ಪಾಶ್ಚಿಮಾತ್ಯ ಮಾಧ್ಯಮಗಳ ಹಳೆಯ ಚಾಳಿ ಮತ್ತು ಪೂರ್ವಾಗ್ರಹ ಪೀಡಿತ ಧೋರಣೆಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram