ಕ್ರೀಡೆಗಳಿಗೆ ಹಿಂದೆಂದಿಗಿಂತಲೂ ಹೆಚ್ಚು ಮಹತ್ವ ಸಿಗುತ್ತಿದೆ : ಸಚಿವ ವಿ.ಸೋಮಣ್ಣ V. Somanna saaksha tv
ಬೆಂಗಳೂರು: ದೇಶದಲ್ಲಿ ಹಿಂದೆಂದಿಗಿಂತಲೂ ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ಸಿಗುತ್ತಿದರ. ಅದರಲ್ಲೂ ಪ್ರಧಾನಿ ಮೋದಿ ಅವರ ಖೇಲೋ ಇಂಡಿಯಾ ಯೋಜನೆಯ ಮೂಲಕ ಕ್ರೀಡಾಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ಸಿಗುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಗೋವಿಂದರಾಜನಗರ ಕ್ಷೇತ್ರದ ಕಾವೇರಿಪುರ ವಾರ್ಡ್ ನಲ್ಲಿ ಬಿಆರ್ ವಿ ಸಂಸ್ಥೆಯ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಕ್ರೀಡೆ- ಸಾಂಸ್ಕೃತಿಕ ವಿದ್ಯಾಲಯ ಹಾಗೂ ಈಜುಕೊಳದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಕ್ರೀಡೆಗಳು ಮನೋಲ್ಲಾಸ ನೀಡುತ್ತವೆ.
ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು, ಆಟ ಮತ್ತು ಪಾಠಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಉನ್ನತ ಜೀವನ ರೂಪಿಸಿಕೊಳ್ಳುವಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ದೈಹಿಕ ಕ್ಷಮತೆ ಹಾಗೂ ಆರೋಗ್ಯ ವೃದ್ಧಿಗೆ ಈ ಕ್ರೀಡೆಗಳು ಸಹಕಾರಿಯಾಗಿವೆ ಎಂದರು.
ಈ ಸಂದರ್ಭದಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.