ಮಠದ ಜಾಗವನ್ನ ಕೋವಿಡ್ ಆಸ್ಪತ್ರೆ ಆರಂಭಿಸಲು ಬಿಟ್ಟುಕೊಡಲು ಸಿದ್ಧ : ಛಲವಾದಿ ಗುರುಪೀಠದ ಶ್ರೀ Sri Basavanagideva Swamiji
ಚಿತ್ರದುರ್ಗ : ಶ್ರೀ ಮಠದ ಜಾಗವನ್ನು ಕೋವಿಡ್ ಆಸ್ಪತ್ರೆ ಹಾಗೂ ಆಕ್ಸಿಜನ್ ಘಟಕ ಆರಂಭಿಸಲು ಬಿಟ್ಟುಕೊಡಲು ಸಿದ್ಧರಾಗಿದ್ದೇವೆ ಎಂದು ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಶ್ರೀ ಮಠದ ಜಾಗವನ್ನು ಕೋವಿಡ್ ಆಸ್ಪತ್ರೆ ಹಾಗೂ ಆಕ್ಸಿಜನ್ ಘಟಕ ಆರಂಭಿಸಲು ಬಿಟ್ಟುಕೊಡಲು ಸಿದ್ದರಾಗಿದ್ದೆವೆ.
ನಾಡಿನ ಎಲ್ಲಾ ಮಠಾಧೀಶರು ಕೋವಿಡ್ ರೋಗಿಗಳ ಸರ್ವ ರೀತಿಯಲ್ಲಿ ಸಹಾಯ ಮಾಡಬೇಕಾಗಿದೆ ಎಂದು ಕರೆಕೊಟ್ಟರು.









